ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ದಲಿತ ಸಂಘಟನೆಗಳು ಏ.02 ರಂದು ಭಾರತ್ ಬಂದ್ ಗೆ ಕರೆ ನೀಡಿವೆ.
ಎಸ್ ಸಿ/ ಎಸ್ ಟಿ ದೌರ್ಜನ್ಯ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದನ್ನು ತಡೆಗಟ್ಟಲು, ಆರೋಪಗಳು ಸುಳ್ಳಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಪ್ರಾಥಮಿಕವಾಗಿ ಡಿಎಸ್ ಪಿ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಮಾ.20 ರಂದು ಆದೇಶ ನೀಡಿತ್ತು. ಈ ಆದೇಶವನ್ನು ದಲಿತ ಸಂಘಟನೆಗಳು ಪ್ರಶ್ನಿಸಿದ್ದು, ಭಾರತ್ ಬಂದ್ ಗೆ ಕರೆ ನೀಡಿವೆ.
ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಈಗಾಗಲೇ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ಸಚಿವ ಥಾವರ್ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.