ಕೇಜ್ರಿವಾಲ್-ಜೇಟ್ಲಿ 
ದೇಶ

ಮಾನನಷ್ಟ ಮೊಕದ್ದಮೆ ಇತ್ಯರ್ಥಕ್ಕಾಗಿ ಜಂಟಿ ಅರ್ಜಿ ಸಲ್ಲಿಸಿದ ಜೇಟ್ಲಿ, ಕೇಜ್ರಿವಾಲ್

ಮಾನನಷ್ಟ ಮೊಕದ್ದಮೆಯನ್ನು ಇತ್ಯರ್ಥಗೊಳಿಸುವುದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇಬ್ಬರೂ ಜಂಟಿ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಮಾನನಷ್ಟ ಮೊಕದ್ದಮೆಯನ್ನು ಇತ್ಯರ್ಥಗೊಳಿಸುವುದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇಬ್ಬರೂ ದೆಹಲಿ ಹೈಕೋರ್ಟ್ ಗೆ  ಜಂಟಿ ಅರ್ಜಿ ಸಲ್ಲಿಸಿದ್ದಾರೆ. 
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರುಣ್ ಜೇಟ್ಲಿ ವಿರುದ್ಧ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ಇತ್ಯರ್ಥಗೊಳಿಸುವ ತೀರ್ಮಾನಕ್ಕೆ ಬರಲಾಗಿದ್ದು ನ್ಯಾ.ಮನ್ ಮೋಹನ್ ಅವರೆದುರು ಅರ್ಜಿ ಸಲ್ಲಿಸಲಾಗಿದೆ. 
ವಿಚಾರಣೆ ನಡೆಸುವುದಕ್ಕೆ ನ್ಯಾಯಾಲಯವೂ ಸಮ್ಮತಿ ಸೂಚಿಸಿದೆ. 2015 ರಲ್ಲಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ 5 ಆಪ್ ನಾಯಕರ ವಿರುದ್ಧ ಅರುಣ್ ಜೇಟ್ಲಿ 10 ಕೋಟಿ ರೂಪಾಯಿಗಳಿಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅರುಣ್ ಜೇಟ್ಲಿ ಡಿಡಿಸಿಎ ಅಧ್ಯಕ್ಷರಾಗಿದ್ದಾಗ ಅಕ್ರಮ ನಡೆದಿದೆ ಎಂದು ಅರುಣ್ ಜೇಟ್ಲಿ ವಿರುದ್ಧ ಕೇಜ್ರಿವಾಲ್ ಆರೋಪಿಸಿದ್ದರು. ಅಷ್ಟೇ ಅಲ್ಲದೇ ಕೇಜ್ರಿವಾಲ್ ಅವರ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲರಾಗಿದ್ದ ರಾಮ್ ಜೇಟ್ಮಲಾನಿ ಅವರು ಜೇಟ್ಲಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಜೇಟ್ಲಿ ಕೇಜ್ರಿವಾಲ್ ವಿರುದ್ಧ 10 ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಈಗಗಾಲೇ ಕ್ಷಮೆ ಕೋರಿದ್ದಾರೆ. ಆದರೆ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಆಪ್ ನಾಯಕ ಕುಮಾರ್ ವಿಶ್ವಾಸ್ ಕ್ಷಮೆ ಕೋರದ ಹಿನ್ನೆಲೆಯಲ್ಲಿ ಅವರ ವಿರುದ್ಧ ವಿಚಾರಣೆ ಮುಂದುವರೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT