ವಿ.ಕೆ.ಸಿಂಗ್ 
ದೇಶ

ಡಿಎನ್ಎ ಪರೀಕ್ಷೆ ಬಳಿಕ ಮತ್ತೋರ್ವ ಭಾರತೀಯನ ಮೃತದೇಹ ಭಾರತಕ್ಕೆ ಕರೆತರಲಾಗುತ್ತದೆ: ವಿ.ಕೆ.ಸಿಂಗ್

ಇರಾಕ್ ನಲ್ಲಿ ನಡೆಯುತ್ತಿರುವ ಡಿಎನ್ಎ ಪರೀಕ್ಷೆ ಪೂರ್ಣಗೊಂಡ ಬಳಿಕ ಮತ್ತೋರ್ವ ಭಾರತೀಯನ ಮೃತದೇಹವನ್ನು ಭಾರತಕ್ಕೆ ಕರೆ ತರಲಾಗುತ್ತದೆ ಎಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಜನರಲ್ (ನಿವೃತ್ತ) ವಿ.ಕೆ. ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ಇರಾಕ್ ನಲ್ಲಿ ನಡೆಯುತ್ತಿರುವ ಡಿಎನ್ಎ ಪರೀಕ್ಷೆ ಪೂರ್ಣಗೊಂಡ ಬಳಿಕ ಮತ್ತೋರ್ವ ಭಾರತೀಯನ ಮೃತದೇಹವನ್ನು ಭಾರತಕ್ಕೆ ಕರೆ ತರಲಾಗುತ್ತದೆ ಎಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಜನರಲ್ (ನಿವೃತ್ತ) ವಿ.ಕೆ. ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ. 
ಇರಾಕ್ ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾಗಿದ್ದ 39 ಭಾರತೀಯರ ಮೃತದೇಹಗಳ ಪೈಕಿ ನಿನ್ನೆಯಷ್ಟೇ 38 ಮೃತದೇಹಗಳನ್ನು ಭಾರತಕ್ಕೆ ಕರೆ ತರಲಾಗಿತ್ತು. ಉಳಿದ ಓರ್ವ ಭಾರತೀಯನ ಗುರುತುಗಳು ಇನ್ನು ಪತ್ತೆಯಾಗದ ಹಿನ್ನಲೆಯಲ್ಲಿ ಇರಾಕ್ ನಲ್ಲಿ ಡಿಎನ್ಎ ಪರೀಕ್ಷೆ ಮುಂದವರೆದಿದೆ. 
ಬಿಹಾರ ರಾಜ್ಯದಿಂದ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು. ರಾಜು ಯಾದವ್ ಎಂಬುವವರ ಮೃತದೇಹವನ್ನು ಭಾರತಕ್ಕೆ ಕರೆ ತರಬೇಕಿದೆ. ಡಿಎನ್ಎ ಪರೀಕ್ಷೆಯಲ್ಲಿ ಶೇ.70ರಷ್ಟು ಮಾತ್ರ ಹೊಂದಾಣಿಕೆಯಾಗಿದೆ. ಕೆಲ ದಿನಗಳ ಹಿಂದಷ್ಟೇ ಮತ್ತೆ ಮಾದರಿಗಳನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷೆಗಳು ಸಂಪೂರ್ಣಗೊಂಡ ಬಳಿಕ ಮೃತದೇಹವನ್ನು ಭಾರತಕ್ಕೆ ಕರೆ ತರಲಾಗುತ್ತದೆ ಎಂದು ಹೇಳಿದ್ದಾರೆ. 
ಇರಾಕ್'ನ ಎರಡನೇ ಅತ್ಯಂತ ದೊಡ್ಡ ನಗರವಾದ ಮೊಸುಲ್ ಅನ್ನು ಇಸಿಸ್ ಉಗ್ರರು 2014ರಲ್ಲಿ ವಶಕ್ಕೆ ಪಡೆದಿದ್ದರು. ಭಾರತದ 40 ಕಾರ್ಮಿಕರ ತಂಡವನ್ನು ಈ ಉಗ್ರರು ಆಗ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದರು. ಇವರಲ್ಲಿ ಹೆಚ್ಚಿನವರು ಪಂಜಾಬ್ ರಾಜ್ಯ ಮೂಲದವರಾಗಿದ್ದಾರೆ. 
ಅವರ ಪೈಕಿ ಗುರ್ದಾಸ್ಪುರದ ಹರ್'ಜೀತ್ ಮಸೀಹ್ ಉಗ್ರರಿಂದ ತಪ್ಪಿಸಿಕೊಂಡು ಭಾರತಕ್ಕೆ ಮರಳಿದ್ದರು. ಉಳಿದ ಎಲ್ಲರನ್ನೂ ಉಗ್ರರು ಹತ್ಯೆ ಮಾಡುವುದನ್ನು ನಾನು ನೋಡಿದ್ದೇನೆಂದು ಹೇಳಿಕೆ ನೀಡಿದ್ದರು. ಆದರೆ, ಭಾರತ ಸರ್ಕಾರ ಇದನ್ನು ಅಲ್ಲಗೆಳೆದಿತ್ತು. ಮಸೀಹ್ ಹೇಳುತ್ತಿರುವುದು ಕಟ್ಟು ಕತೆ. ತಾನು ಬಾಂಗ್ಲಾದೇಶ ಮುಸ್ಲಿಂ ಎಂದು ಸುಳ್ಳು ಹೇಳಿ ಮಸೀಹ್ ತಪ್ಪಿಸಿಕೊಂಡಿದ್ದರು ಎಂದು ಸುಷ್ಮಾ ಪ್ರತಿಕ್ರಿಯೆ ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT