ನವದೆಹಲಿ: ಸಿಬಿಎಸ್ಇ ಯ 12 ನೇ ತರಗತಿಯ ಅರ್ಥಶಾಸ್ತ್ರ ಹಾಗೂ 1 ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಿಕ್ಷಕರ ಶಾಲೆಯ ಪ್ರಾಂಶುಪಾಲರನ್ನು ಸತತ 6 ಗಂಟೆಗಳವರೆಗೆ ವಿಚಾರಣೆ ನಡೆಸಲಾಗಿದೆ.
ಹರ್ಯಾಣದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರಬಹುದೆಂಬ ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಇನ್ನು ಅಮಾನತುಗೊಂಡಿರುವ ಸಿಬಿಎಸ್ಇ ಅಧಿಕಾರಿ ಆರೋಪಿಗಳೊಂದಿಗೆ ಶಾಮೀಲಾಗಿರುವುದಕ್ಕೂ ಯಾವುದೇ ಮಹತ್ವದ ಸಾಕ್ಷ್ಯಗಳು ಪೊಲೀಸರಿಗೆ ಈ ವರೆಗೂ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಸಿಬಿಎಸ್ಇ ಅಧಿಕಾರಿ ಆರೋಪಿಗಳೊಂದಿಗೆ ಶಾಮೀಲಾಗಿರುವ ಸಾಧ್ಯತೆಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.
ಪ್ರಶ್ನೆಪತ್ರಿಕೆಗಳನ್ನು ತಲುಪಿಸುವುದರಲ್ಲಿ ಅಧಿಕಾರಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ, ಅಮಾನತುಗೊಂಡಿರುವ ಅಧಿಕಾರಿ ಎಲ್ಲಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನೂ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ತಲುಪಿಸಿದ್ದಾರೆ. ಆದರೆ ಸೋರಿಕೆಯ ಪ್ರಕರಣದಲ್ಲಿ ಆರೋಪಿಗಳೊಂದಿಗೆ ಶಾಮೀಲಾಗಿರುವುದಕ್ಕೆ ಈ ವರೆಗೂ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಂಶುಪಾಲರ ಜೊತೆಗೆ ಈಗಾಗಲೇ ಬಂಧನಕ್ಕೊಳಗಾಗಿರುವ ಶಿಕ್ಷಕರನ್ನೂ ಸಹ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos