ಸಾಂದರ್ಭಿಕ ಚಿತ್ರ 
ದೇಶ

ಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: 10ನೇ ತರಗತಿ ಗಣಿತ ಮರುಪರೀಕ್ಷೆ ಇಲ್ಲ, ನಿಟ್ಟುಸಿರು ಬಿಟ್ಟ ವಿದ್ಯಾರ್ಥಿಗಳು

ಸಿಬಿಎಸ್ಇ 10ನೇ ತರಗತಿ ಗಣಿತ ವಿಷಯದ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್ಇ ಮಂಗಳವಾರ ಸ್ಪಷ್ಟಪಡಿಸಿದೆ...

ನವದೆಹಲಿ: ಸಿಬಿಎಸ್ಇ 10ನೇ ತರಗತಿ ಗಣಿತ ವಿಷಯದ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್ಇ ಮಂಗಳವಾರ ಸ್ಪಷ್ಟಪಡಿಸಿದೆ. 
ಈ ಕುರಿತಂತೆ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಅನಿಲ್ ಸ್ವರೂಪ್ ಅವರು ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದು, ಸಿಬಿಎಸ್ಇ 10ನೇ ತರಗತಿ ಮರು ಪರೀಕ್ಷೆ ಇಲ್ಲ ಎಂದು ಹೇಳಿದ್ದಾರೆ. 
ಪರೀಕ್ಷೆಗಿಂತ ಕೆಲ ಗಂಟೆಗಳ ಹಿಂದೆ ಪ್ರಶ್ನೆಪತ್ರಿಕೆ ಸೋರಿಯಾಗಿದ್ದ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿತ್ತು. ಇದೀಗ ಸಿಬಿಎಸ್ಇ 10ನೇ ತರಗತಿ ಮರುಪರೀಕ್ಷೆ ನಡೆಸಿದಿರಲು ತೀರ್ಮಾನ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 28 ರಂದು ಸಿಬಿಎಸ್ಇ 10ನೇ ತರಗತಿಯ ಗಣಿತ ಪರೀಕ್ಷೆ ನಡೆದಿತ್ತು. ದೆಹಲಿ ಎನ್'ಸಿಆರ್ ಮತ್ತು ಹರಿಯಾಣ ರಾಜ್ಯದಲ್ಲಿ ಪರೀಕ್ಷೆಗೂ 1 ಗಂಟೆ ಮುಂಚೆ ಪ್ರಶ್ನೆ ಪತ್ರಿಕೆ ಸೋರಿಯಾಗಿತ್ತು. ಈ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸಲು ಸಿಬಿಎಸ್ಇ ಈ ಹಿಂದೆ ನಿರ್ಧರಿಸಿತ್ತು. 
ನಂತರ ಉತ್ತರ ಪತ್ರಿಕೆಗಳ ಆಳವಾದ ವೀಕ್ಷಣೆ ಮತ್ತು ಮೌಲ್ಯಮಾಪನದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆಯಿಂದ ನಿರ್ದಿಷ್ಟ ಪರಿಣಾಮವಾಗಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಹೀಗಾಗಿ ಮರುಪರೀಕ್ಷೆ ನಡೆಸದರಿಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT