ಸಾಂದರ್ಭಿಕ ಚಿತ್ರ 
ದೇಶ

ಪಿಎನ್ ಬಿ ವಂಚನೆ; ಆರ್ ಬಿಐ ಸರಿಯಾಗಿ ಆಡಿಟಿಂಗ್ ಮಾಡುತ್ತಿಲ್ಲ: ಸಿವಿಸಿ

ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್....

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ವಿರುದ್ಧ ಆರೋಪ ಮಾಡಿರುವ ಕೇಂದ್ರ ಜಾಗೃತ ಆಯುಕ್ತ(ಸಿವಿಸಿ) ಕೆ.ವಿ.ಚೌಧರಿ ಅವರು, ಕೇಂದ್ರೀಯ ಬ್ಯಾಂಕ್ ಸೂಕ್ತ ರೀತಿಯಲ್ಲಿ ಆಡಿಟಿಂಗ್ ಮಾಡುತ್ತಿಲ್ಲ ಎಂದು ದೂರಿದ್ದಾರೆ.
ಪಿಎನ್ ಬಿ ವಂಚನೆ ನಡೆದ ಅವಧಿಯಲ್ಲಿ ಆರ್ ಬಿಐ ಸರಿಯಾಗಿ ಆಡಿಟಿಂಗ್ ಮಾಡಿಲ್ಲ ಮತ್ತು ಆಡಿಟಿಂಗ್ ವ್ಯವಸ್ಥೆ ಹೆಚ್ಚು ಸದೃಢವಾಗುವ ಅಗತ್ಯ ಇದೆ ಎಂದು ಚೌಧರಿ ಹೇಳಿದ್ದಾರೆ.
ಸಿವಿಸಿ, 13 ಸಾವಿರ ಕೋಟಿ ರುಪಾಯಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಸಿಬಿಐ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರವನ್ನು ನಿಯಂತ್ರಿಸುವ ಆರ್ ಬಿಐ ಆರ್ಥಿಕ ಸಂಕಷ್ಟದ ಸಮಯದಲ್ಲಿ ನಡೆಸುವ 'ಅಪಾಯ ಆಧಾರಿತ' ಆಡಿಟಿಂಗ್ ಅನ್ನು ಕೆಲಕಾಲ ಸ್ಥಗಿತಗೊಳಿಸಿತ್ತು ಎಂದು ಚೌಧರಿ ತಿಳಿಸಿದ್ದಾರೆ.
ಆರ್ ಬಿಐ ಬ್ಯಾಂಕ್ ಗಳಿಗೆ ಕೇವಲ ಮಾರ್ಗದರ್ಶಿಗಳನ್ನು ಮಾತ್ರ ನೀಡುತ್ತದೆ. ಆದರೆ ಬ್ಯಾಂಕ್ ಗಳಲ್ಲಿ ನಿಜಕ್ಕೂ ಏನು ನಡೆಯುತ್ತಿದೆ ಎಂಬುದನ್ನು ಬ್ಯಾಂಕ್ ಶಾಖೆಗಳಿಗೆ ತೆರಳಿ ಪರಿಶೀಲಿಸುವುದಿಲ್ಲ ಸಿವಿಸಿ ಆಕ್ರೋಶ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT