ಕಾರ್ತಿ ಚಿದಂಬರಂ 
ದೇಶ

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂ ಸಿಎಗೆ ಜಾಮೀನು

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ....

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್ ಅವರಿಗೆ ಸಿಬಿಐ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಭಾಸ್ಕರರಾಮನ್ ಅವರು ಮಾರ್ಚ್ 26ರಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್, ಆರೋಪಿಗೆ ಜಾಮೀನು ನೀಡಿ ಆದೇಶಿಸಿದೆ.
ಫೆಬ್ರವರಿ 16ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭಾಸ್ಕರರಾಮನ್ ಅವರನ್ನು ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಸ್ಟಾರ್ ಹೋಟೆಲ್ ವೊಂದರಲ್ಲಿ ಬಂಧಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಫೆ.26ರ ವರೆಗೆ ತಮ್ಮ ವಶಕ್ಕೆ ಪಡೆದಿದ್ದರು. 
ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್ ಅವರನ್ನು ಬಂಧಿಸಿತ್ತು.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಸಹ ಪ್ರಕರಣ ದಾಖಲಿಸಿಕೊಂಡಿದ್ದು, ಫೆಬ್ರವರಿ 28ರಂದು ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿತ್ತು. ಬಳಿಕ ಜಾಮೀನಿನ ಮೇಲೆ ಕಾರ್ತಿ ಚಿದಂಬರಂ ಬಿಡುಗಡೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT