ಸಾಂದರ್ಭಿಕ ಚಿತ್ರ 
ದೇಶ

ಲಂಕಾ ನೌಕಾಪಡೆಯಿಂದ ತಮಿಳುನಾಡು ಮೀನುಗಾರರ ಮೇಲೆ ದಾಳಿ, ಐವರಿಗೆ ಗಾಯ

ವೇದಾರಣ್ಯಂ ಕರಾವಳಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ....

ನಾಗಪಟ್ಟಣಂ: ವೇದಾರಣ್ಯಂ ಕರಾವಳಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಗಾಯಗೊಂಡ ಮೀನುಗಾರರು ನಾಗಪಟ್ಟಣಂ ಜಿಲ್ಲೆಯ ನಾಗೋರ್ ನಿವಾಸಿಗಳಾಗಿದ್ದು, ಬುಧವಾರ ತಡರಾತ್ರಿ ಮೀನುಗಾರರ ಮೇಲೆ ಲಂಕಾ ಪಡೆ ದಾಳಿ ನಡೆಸಿದೆ ಎಂದು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕೆ ಗಂಗಾಧರನ್ ಅವರು ಹೇಳಿದ್ದಾರೆ.
ಲಂಕಾ ನೌಕಾಪಡೆ ಸಿಬ್ಬಂದಿ ನಮ್ಮ ನಾವು ಹಿಡಿದ ಮೀನು, ಜಿಪಿಎಸ್ ಸಲಕರಣೆ ಮತ್ತು ಬಲೆಯನ್ನು ಕಿತ್ತುಕೊಂಡಿದ್ದಾರೆ ಎಂದು ಗಾಯಗೊಂಡ ಮೀನುಗಾರ ರಮೇಶ್ ಅವರು ಆರೋಪಿಸಿದ್ದಾರೆ.
ಗಾಯಗೊಂಡ ಐವರು ಮೀನುಗಾರರು ಇಂದು ಬೆಳಗ್ಗೆ ತವರಿಗೆ ಮರಳಿದ್ದು, ಅವರನ್ನು ನಾಗಪಟ್ಟಣಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕರಾವಳಿ ಭದ್ರತಾ ಪಡೆ ಪೊಲೀಸರಿಗೆ ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಗಂಗಾಧರನ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT