ಸಾಂದರ್ಭಿಕ ಚಿತ್ರ 
ದೇಶ

ಲಂಕಾ ನೌಕಾಪಡೆಯಿಂದ ತಮಿಳುನಾಡು ಮೀನುಗಾರರ ಮೇಲೆ ದಾಳಿ, ಐವರಿಗೆ ಗಾಯ

ವೇದಾರಣ್ಯಂ ಕರಾವಳಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ....

ನಾಗಪಟ್ಟಣಂ: ವೇದಾರಣ್ಯಂ ಕರಾವಳಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಗಾಯಗೊಂಡ ಮೀನುಗಾರರು ನಾಗಪಟ್ಟಣಂ ಜಿಲ್ಲೆಯ ನಾಗೋರ್ ನಿವಾಸಿಗಳಾಗಿದ್ದು, ಬುಧವಾರ ತಡರಾತ್ರಿ ಮೀನುಗಾರರ ಮೇಲೆ ಲಂಕಾ ಪಡೆ ದಾಳಿ ನಡೆಸಿದೆ ಎಂದು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕೆ ಗಂಗಾಧರನ್ ಅವರು ಹೇಳಿದ್ದಾರೆ.
ಲಂಕಾ ನೌಕಾಪಡೆ ಸಿಬ್ಬಂದಿ ನಮ್ಮ ನಾವು ಹಿಡಿದ ಮೀನು, ಜಿಪಿಎಸ್ ಸಲಕರಣೆ ಮತ್ತು ಬಲೆಯನ್ನು ಕಿತ್ತುಕೊಂಡಿದ್ದಾರೆ ಎಂದು ಗಾಯಗೊಂಡ ಮೀನುಗಾರ ರಮೇಶ್ ಅವರು ಆರೋಪಿಸಿದ್ದಾರೆ.
ಗಾಯಗೊಂಡ ಐವರು ಮೀನುಗಾರರು ಇಂದು ಬೆಳಗ್ಗೆ ತವರಿಗೆ ಮರಳಿದ್ದು, ಅವರನ್ನು ನಾಗಪಟ್ಟಣಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕರಾವಳಿ ಭದ್ರತಾ ಪಡೆ ಪೊಲೀಸರಿಗೆ ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಗಂಗಾಧರನ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT