ಜಯಾ ಬಚ್ಚನ್ 
ದೇಶ

ಸಲ್ಮಾನ್ ಮಾನವೀಯ ಕೆಲಸ ಮಾಡಿದ್ದಾರೆ, ಅವರಿಗೆ ಬಿಡುಗಡೆಯಾಗಬೇಕು: ಜಯಾ ಬಚ್ಚನ್‌

ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೋಧಪುರ ನ್ಯಾಯಾಲಯ 5 ವರ್ಷ ಶಿಕ್ಷೆ ವಿಧಿಸಿದ್ದು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ಈ ತೀರ್ಪಿನ ಕುರಿತು ನಿರಾಶೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೋಧಪುರ ನ್ಯಾಯಾಲಯ 5 ವರ್ಷ ಶಿಕ್ಷೆ  ವಿಧಿಸಿದ್ದು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ಈ ತೀರ್ಪಿನ ಕುರಿತು ನಿರಾಶೆ ವ್ಯಕ್ತಪಡಿಸಿದ್ದಾರೆ.
"ತೀರ್ಪು ನನಗೆ ನಿರಾಶೆ ತರಿಸಿದೆ, ನಟ ಸಲ್ಮಾನ್ ಖಾನ್ ಇದುವರೆಗೂ ಅನೇಕ ಮಾನವೀಕ ಕಾರ್ಯಗಳನ್ನು ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಬಿಡುಗಡೆ ನಿಡಬೇಕಿದೆ" ರಾಜ್ಯಸಭಾ ಸದಸ್ಯೆ ಹೇಳಿದ್ದಾರೆ.
19 ವರ್ಷಗಳ ಹಿಂದೆ ನಡೆದ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಜೋಧಪುರ ನ್ಯಾಯಾಲಯವು ಬಾಲಿವುಡ್ ನಟನಿಗೆ 5 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿತ್ತು. ಅಲ್ಲದೆ ಪ್ರಕರಣದ ಸಹ ಆರೋಪಿಗಳಾಗಿದ್ದ ನಟ  ಸೈಫ್ ಅಲಿ ಖಾನ್, ನಟಿಯರಾದ  ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ, ಅವರುಗಳನ್ನು ಖುಲಾಸೆಗೊಳಿಸಿದೆ.
ಸಲ್ಮಾನ್ ಜಾಮೀನು ಅರ್ಜಿಯು ನಾಳೆ (ಏ.6) ಸೆಷನ್ಸ್‌ ನ್ಯಾಯಾಲಯದಲ್ಲಿ ನಡೆಯಲಿದೆ.
1998ರಲ್ಲಿ ಹಮ್ ಸಾಥ್ ಸಾಥ್ ಹೈ ಚಿತ್ರೀಕರಣದ ವೇಳೆ ಜೋಧಪುರದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದು ಈ ಸಂದರ್ಭ ಅವರು ಬಳಸಿದ್ದ  ಬಂದೂಕಿಗೆ ಪರವಾನಿಗೆ ಇರಲಿಲ್ಲ. ಇದೇ ಕಾರಣಕ್ಕೆ ಅವರ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT