ಸುಪ್ರೀಂಕೋರ್ಟ್ 
ದೇಶ

ಕಾವೇರಿ ವಿಚಾರ ನಾವು ನೋಡಿಕೊಳ್ಳುತ್ತೇವೆ, ತಮಿಳುನಾಡು ಶಾಂತಿ ಕಾಪಾಡಬೇಕು: ಸುಪ್ರೀಂ ಕೋರ್ಟ್

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿ ರಚನೆ ಮಾಡದ ಹಿನ್ನೆಲೆಯಲ್ಲಿ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಅಸಮಾಧಾನ ಹೊರಹಾಕಿರುವ ಸುಪ್ರೀಂಕೋರ್ಟ್...

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿ ರಚನೆ ಮಾಡದ ಹಿನ್ನೆಲೆಯಲ್ಲಿ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಅಸಮಾಧಾನ ಹೊರಹಾಕಿರುವ ಸುಪ್ರೀಂಕೋರ್ಟ್, ಕಾವೇರಿ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ, ತಮಿಳುನಾಡು ಮೊದಲು ಶಾಂತಿಯನ್ನು ಕಾಪಾಡಬೇಕೆಂದು ಬುಧವಾರ ಹೇಳಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯಕ್ಕೆ ತಮಿಳುನಾಡು ರಾಜ್ಯದ ಪರವಕೀಲ ಉಮಾಪತಿಯವರು ಆಗಮಿಸಿದ್ದರು. ಈ ವೇಳೆ ವಕೀಲರೊಂದಿಗೆ ಮಾತನಾಡಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ತಮಿಳುನಾಡಿನಲ್ಲಿ ಏನಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. 
ತಮಿಳುನಾಡಿನಲ್ಲಿ ಎಲ್ಲಡೆ ಪ್ರತಿಭಟನೆಗಳೇಕೆ ನಡೆಯುತ್ತಿದೆ? ಕಾವೇರಿ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ. ತಮಿಳುನಾಡಿನ ಜನತೆ ಹಾಗೂ ಅಲ್ಲಿನ ಪಕ್ಷಗಳು ಮೊದಲು ಪ್ರತಿಭಟನೆಗಳನ್ನು ಕೈಬಿಡಬೇಕೆಂದು ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ. 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಏ.9 ರಂದು ವಿಚಾರಣೆ ನಡೆಯಲಿದ್ದು, ಅಂದು ಆದೇಶವನ್ನು ಹೊರಡಿಸಲಾಗುತ್ತದೆ. ತಮಿಳುನಾಡಿನ ಭಾಗಕ್ಕೆ ಬರಬೇಕಿರುವ ನೀರನ್ನು ನೀಡಲಾಗುತ್ತೆ. ತಮಿಳುನಾಡಿನಲ್ಲಿ ಮೊದಲು ಶಾಂತಿ ಸ್ಥಾಪನೆಯಾಗಬೇಕು. ತಮಿಳುನಾಡು ಜನತೆ ಮೊದಲು ಶಾಂತಿಯನ್ನು ಕಾಪಾಡಬೇಕು. ರೈಲುಗಳನ್ನು ತಡೆಹಿಡಿಯಲು ಹಾಗೂ ಪ್ರತಿಭಟನೆ ನಡೆಸುವ ಸಲುವಾಗಿ ಕೇಂದ್ರ ಸರ್ಕಾರಕ್ಕೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಸೂಚಿಸಿಲ್ಲ ಎಂದು ತಿಳಿಸಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT