ದೆಹಲಿ ಧೂಳುಮಯ 
ದೇಶ

ದೆಹಲಿಯಲ್ಲಿ ಭಾರಿ ಧೂಳು, ಮಳೆ, 24 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಶುಕ್ರವಾರ ಸಂಜೆ ದಿಢೀರ್ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದ್ದು, ರಾಷ್ಟ್ರ ರಾಜಧಾನಿ ಸಂಪೂರ್ಣ...

ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ಸಂಜೆ ದಿಢೀರ್ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದ್ದು, ರಾಷ್ಟ್ರ ರಾಜಧಾನಿ ಸಂಪೂರ್ಣ ಧೂಳುಮಯವಾಗಿದೆ.
ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಧೂಳು ಆವರಿಸಿಕೊಂಡಿದ್ದರಿಂದ ದೆಹಲಿಗೆ ಆಗಮಿಸಬೇಕಿದ್ದ 24 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಹಲವು ವಿಮಾನಗಳ ಸಂಚಾರ ವಿಳಂಬವಾಗಿದೆ. 
ಧೂಳಿನಿಂದಾಗಿ ರಸ್ತೆ ಸಂಚಾರಕ್ಕೂ ಭಾರಿ ತೊಂದರೆ ಉಂಟಾಗಿದ್ದು, ವಾಹನ ಸವಾರರಿಗೆ, ಪಾದಚಾರಿಗಳು ಸಹ ಪರದಾಡುವಂತಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ರೈಸಿನಾ ಹಿಲ್‌ ಕಾಂಪ್ಲೆಕ್ಸ್, ಸಂಸತ್‌ ಭವನದ ಆಸುಪಾಸಿನ ಸರ್ಕಾರ ಕಟ್ಟಡಗಳೂ ಧೂಳುಮಯವಾಗಿವೆ.
ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳದಿಂದ ತತ್ತರಿಸಿದ್ದ ದೆಹಲಿ ನಾಗರಿಕರಿಗೆ ಈ ಹವಾಮಾನ ಬದಲಾವಣೆ ತುಸು ನೆಮ್ಮದಿ ತಂದಿದ್ದರೂ ಧೂಳುಮಯವಾಗಿರುವುದು ಮತ್ತೊಂದು ಸಮಸ್ಯೆ ಎದುರಿಸುವಂತಾಗಿದೆ.
ಕಳೆದ ಗುರುವಾರವೇ ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಕೆಲವು ದಿನಗಳಿಂದ ದೆಹಲಿಯ ತಾಪಮಾನ 36 ಡಿಗ್ರಿ ಆಸುಪಾಸಿನಲ್ಲಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT