ಶಿರಚ್ಚೇದ ಅಂಬೇಡ್ಕರ್ ಪ್ರತಿಮೆ 
ದೇಶ

ಮಧ್ಯಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ವಿಧ್ವಂಸ

ಮಧ್ಯಪ್ರದೇಶದ ಕೇರಿಯಾ ಹಳ್ಳಿಯಲ್ಲಿ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ.ನಂತರ ಈ ಪ್ರತಿಮೆಯನ್ನು ಮತ್ತೊಂದೆಡೆಗೆ ಜಿಲ್ಲಾಡಳಿತದಿಂದ ಸ್ಥಳಾಂತರಿಸಲಾಗಿದೆ.

ಭೂಪಾಲ್ : ಮಧ್ಯಪ್ರದೇಶದ ಕೇರಿಯಾ ಹಳ್ಳಿಯಲ್ಲಿ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ.ನಂತರ ಈ ಪ್ರತಿಮೆಯನ್ನು ಮತ್ತೊಂದೆಡೆಗೆ ಜಿಲ್ಲಾಡಳಿತದಿಂದ ಸ್ಥಳಾಂತರಿಸಲಾಗಿದೆ.

ಮತ್ತೊಂದು ಘಟನೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಸಾತ್ನಾ ಜನವಸತಿ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸುವ ಮೂಲಕ ಹೀನಕೃತ್ಯವೆಸಗಿದ್ದಾರೆ.

ರಾಜಸ್ತಾನದ ಅಕ್ರೋಲ್ ನಲ್ಲಿ ನಿನ್ನೆ ದಿನ ಅಂಬೇಡ್ಕರ್ ಪ್ರತಿಮೆ ಶಿರಚ್ಚೇದನ ಮಾಡಲಾಗಿತ್ತು.
ಈ ವಾರದಲ್ಲಿ ರಾಜಸ್ತಾನದ ನಾಥ್ ದ್ವಾರದಲ್ಲಿ ಮಹಾತ್ಮಗಾಂಧಿ ಅವರ ಪ್ರತಿಮೆಯನ್ನು ಶಿರಚ್ಚೇದ ಮಾಡಲಾಗಿತ್ತು.

ಕಳೆದ ತಿಂಗಳು ಪಶ್ಚಿಮ ಬಂಗಾಳದಲ್ಲಿ ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಕೆಳಕ್ಕೆ ಉರುಳಿಸಲಾಗಿತ್ತು. ಅಸ್ಸಾಂನ ಕೋಕ್ರಾಝಾರ್ ನಲ್ಲಿ ಭಾರತೀಯ ಜನ ಸಂಘ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು.

ಈಶಾನ್ಯ ರಾಜ್ಯ ತ್ರಿಪುರಾದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ಕಮ್ಯೂನಿಸ್ಟ್ ನಾಯಕ ಲೆನಿನ್ ಪ್ರತಿಮೆ ಧ್ವಂಸಗೊಳಿಸಿದ ನಂತರ ದೇಶದ ಇತರೆಡೆಯೂ ವಿವಿಧ ನಾಯಕರ ಪ್ರತಿಮೆ ಧ್ವಂಸಗೊಳಿಸುವಂತಹ  ಹೀನ ಕೃತ್ಯಗಳು ನಡೆಯುತ್ತಿವೆ.

ತಮಿಳುನಾಡಿನ  ಸಾಮಾಜಿಕ ಸುಧಾರಕ ಇ. ವಿ. ರಾಮಸ್ವಾಮಿ ಹಾಗೂ ಪೆರಿಯಾರ್ ಅವರ ಪ್ರತಿಮೆಗೂ ಹಾನಿ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲಿಸಿ, ಎನ್‌ಐಎ ತನಿಖೆಗೆ ವಹಿಸಿ: ಆರ್‌. ಅಶೋಕ ಆಗ್ರಹ

ಕೊಯಮತ್ತೂರು: ತಮಿಳು ಮಾತನಾಡದಿದ್ದಕ್ಕೆ ವಲಸೆ ಕಾರ್ಮಿಕನಿಗೆ ಚಾಕು ಇರಿತ; ಆರೋಪಿಗಳಿಗೆ ಹುಡುಕಾಟ

Video: ಹಿಂದೂ ದೇವರಿಗೆ 'ಅವಮಾನ': ಹೈದರಾಬಾದ್ ಯೂಟ್ಯೂಬರ್ Anvesh ವಿರುದ್ಧ ಪೊಲೀಸ್ ದೂರು, ಕಾರಣ ನಟ ಶಿವಾಜಿ!

Osman Hadi ಕೊಲೆಗಾರ ಭಾರತದಲ್ಲಿದ್ದಾನೆ ಎಂದ ಬಾಂಗ್ಲಾದೇಶಕ್ಕೆ ತೀವ್ರ ಮುಖಭಂಗ; ದುಬೈನಲ್ಲಿ ಲೈವ್ ಬಂದು ಸ್ಪಷ್ಟನೆ..! ಹೇಳಿದ್ದೇನು?

SCROLL FOR NEXT