ಸಾಂದರ್ಭಿಕ ಚಿತ್ರ 
ದೇಶ

ಸಂಸತ್ ಕಲಾಪಕ್ಕೆ ಅಡ್ಡಿ : ವಿಪಕ್ಷಗಳ ವಿರುದ್ಧ ಬಿಜೆಪಿ ಸಂಸದರಿಂದ ಉಪವಾಸ ಪ್ರತಿಭಟನೆ- ಪ್ರಧಾನಿ ಮೋದಿ

ಪ್ರತಿಪಕ್ಷಗಳು ವಿಭಜನೆಯ ರಾಜಕೀಯ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದು, ಪಾರ್ಲಿಮೆಂಟ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಇದೇ 12 ರಂದು ಉಪವಾಸ ಸತ್ಯಾಗ್ರಹ ನಡೆಸಲು ಚಿಂತನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ :  ಪ್ರತಿಪಕ್ಷಗಳು ವಿಭಜನೆಯ ರಾಜಕೀಯ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದು, ಪಾರ್ಲಿಮೆಂಟ್  ಬಿಕ್ಕಟ್ಟು ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಇದೇ 12 ರಂದು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಹೇಳಿದ್ದಾರೆ

ಎಲ್ಲರನ್ನೊಳಗೊಂಡ ರಾಜಕೀಯವನ್ನು ಆಡಳಿತಾರೂಢ ಪಕ್ಷ ಮಾಡುತ್ತಿದ್ದರೂ ಪ್ರತಿಪಕ್ಷಗಳು ವಿಭಜನೆಯ ರಾಜಕಾರಣ ಮಾಡುತ್ತಿವೆ. ಕೇಸರಿ ಪಕ್ಷ ಸದನದಲ್ಲಿ ಪಾಬಲ್ಯ ತೋರುವಂತೆ ಪ್ರಧಾನಿ ನರೇಂದ್ರಮೋದಿ ಪಕ್ಷದ ಸಂಸದೀಯ ಸಮಿತಿ ಸಭೆಯಲ್ಲಿ ಪ್ರಧಾನಿ ಹೇಳಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಜೆಪಿ ಸಂಸದರು ಮತ್ತು ನಾಯಕರು ಏಪ್ರಿಲ್ 14  ಹಾಗೂ ಮೇ 5 ರಂದು ಶೇ 50ಕ್ಕಿಂತಲೂ ಹೆಚ್ಚು ಪರಿಶಿಷ್ಟ ಜಾತಿ, ಪಂಗಡದ ಜನರು ವಾಸಿಸುತ್ತಿರುವ 20, 844 ಹಳ್ಳಿಗಳಲ್ಲಿ ಒಂದು ರಾತ್ರಿ ಕಳೆಯುವ ಮೂಲಕ ಕೇಂದ್ರದ ಜನಪರ ಕಲ್ಯಾಣಗಳ ಬಗ್ಗೆ ಮನವರಿಕೆ ಮಾಡಿಕೊಡುವಂತೆ ನರೇಂದ್ರಮೋದಿ ಹೇಳಿದ್ದಾರೆ ಎಂದು ಅನಂತ್ ಕುಮಾರ್ ಹೇಳಿದರು.

ಬಿಜೆಪಿ ಸಬ್ ಕಾ ಸಾಥ್, ಸಾಬ್ ಕಾ ವಿಕಾಸ್  ಯಾತ್ರೆಯನ್ನು ಬಿಜೆಪಿ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

38 ನೇ ಬಿಜೆಪಿ ಸಂಸ್ಥಾಪನಾ ದಿನದಲ್ಲಿ ಪಾಲ್ಗೊಂಡು ಮಾತನಾಡಿದ  ನರೇಂದ್ರಮೋದಿ ಅಸಂಖ್ಯಾತ ಕಾರ್ಯಕರ್ತರ ಬೆಂಬಲದಿಂದಾಗಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಬೆಳೆದಿದ್ದು, ನಿಧನರಾಗಿರುವ ಹಲವು ನಾಯಕರು, ಕಾರ್ಯಕರ್ತರನ್ನು ಸ್ಮರಿಸಿದರು.

 ಪಕ್ಷದ ಬೆಳವಣಿಗೆಗಾಗಿ ತಮ್ಮ ಜೀವ ತ್ಯಾಗ ಮಾಡಿದ ಹಲವು  ನಾಯಕರಿಗೆ ಸಂಸ್ಥಾಪನಾ ದಿನವನ್ನು ಆರ್ಪಿಸುವುದಾಗಿ ನರೇಂದ್ರಮೋದಿ ಹೇಳಿದರು.




Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT