ನೇಪಾಳ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಅವರಿಗೆ ಸ್ವಾಗತ ಕೋರುತ್ತಿರುವ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ

ಮೂರು ದಿನಗಳ ಭೇಟಿಗಾಗಿ ನೇಪಾಳ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಗೃಹ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು.

ನವದೆಹಲಿ : ಮೂರು ದಿನಗಳ ಭೇಟಿಗಾಗಿ ನೇಪಾಳ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಗೃಹ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು.

ಕೆ. ಪಿ. ಶರ್ಮಾ ಒಲಿ ಉಭಯ ದೇಶಗಳ ಬಾಂಧವ್ಯ ವೃದ್ಧಿ ಹಿನ್ನೆಲೆಯಲ್ಲಿ ಭಾರತದ ಹಲವು ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆ ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದು, ನಾಳೆ ನಿಯೋಗ ಮಟ್ಟದಲ್ಲಿ ಮಾತುಕತೆ ನಡೆಯಲಿದೆ.

ಕೆ. ಪಿ. ಶರ್ಮಾ ಒಲಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಾಳೆ ಔಪಚಾರಿಕ ಸ್ವಾಗತ ಕಾರ್ಯಕ್ರಮ ನೀಡಲಾಗುತ್ತಿದೆ.

ಮೂರು ದಿನಗಳ ಪ್ರವಾಸದಲ್ಲಿ ನೇಪಾಳ ಪ್ರಧಾನಿ ಉತ್ತರ ಖಂಡ್ ರಾಜ್ಯದ ಪಂಥ್ ನಗರದಲ್ಲಿನ ಜಿ. ಬಿ. ಪಂಥ್  ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.   ತಳಿ ಬೀಜ ಉತ್ಪಾದನೆ ಕೇಂದ್ರಕ್ಕೂ ಭೇಟಿ ನೀಡಲಿದ್ದು, ಕೃಷಿ ಯೋಜನೆಗಳ ಬಗ್ಗೆ ಸಂವಾದ ನಡೆಸಲಿದ್ದಾರೆ. ಅಲ್ಲದೇ ಒಲಿ ಅವರು ಡಾಕ್ಟರ್ ಆಫ್ ಸೈನ್ಸ್ ಗೌರವಕ್ಕೆ ಭಾಜನರಾಗಲಿದ್ದಾರೆ.

 ಫೆಬ್ರವರಿ  ತಿಂಗಳಲ್ಲಿ ನೇಪಾಳ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಒಲಿ ಎರಡನೇ ಬಾರಿಗೆ ಭಾರತಕ್ಕೆ ಆಗಮಿಸಿದ್ದಾರೆ.



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT