ಸಂಗ್ರಹ ಚಿತ್ರ 
ದೇಶ

ಗದ್ದಲದಲ್ಲೇ ಸಂಸತ್ ಅಧಿವೇಶನ ಅಂತ್ಯ: ಉಭಯ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದಿಂದಾಗಿಯೇ ಸುದ್ದಿಗೆ ಗ್ರಾಸವಾಗಿದ್ದ ಸಂಸತ್ ಅಧಿವೇಶನ ಯಾವುದೇ ರೀತಿಯ ಫಲಪ್ರದ ಚರ್ಚೆ ಇಲ್ಲದೇ ಅಂತ್ಯವಾಗಿದ್ದು, ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ.

ನವದೆಹಲಿ: ವಿಪಕ್ಷಗಳ ಗದ್ದಲದಿಂದಾಗಿಯೇ ಸುದ್ದಿಗೆ ಗ್ರಾಸವಾಗಿದ್ದ ಸಂಸತ್ ಅಧಿವೇಶನ ಯಾವುದೇ ರೀತಿಯ ಫಲಪ್ರದ ಚರ್ಚೆ ಇಲ್ಲದೇ ಅಂತ್ಯವಾಗಿದ್ದು, ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ.
ಕಳೆದ ಮಾರ್ಚ್ 5ರಂದು ಆರಂಭವಾಗಿದ್ದ ಸಂಸತ್ ಕಲಾಪ ಒಂದೇ ಒಂದು ಮಸೂದೆಯನ್ನೂ ಅಂಗೀಕಾರ ಮಾಡಲಾಗದೇ ಕೇವಲ ಗದ್ದಲಗಳ ಗೊಂದಲದಲ್ಲೇ ಅಂತ್ಯಗೊಂಡಿದೆ. ಈಶಾನ್ಯ ಭಾರತ ರಾಜ್ಯದ ವಿಧಾನಸಭಾ ಚುನಾವಣೆ ಬಳಿಕ ನಡೆದ ಪ್ರತಿಮೆ ಧ್ವಂಸ ವಿಚಾರದಿಂದ ಆರಂಭವಾದ ವಿಪಕ್ಷಗಳ ಗಲಾಟೆ, ಗದ್ದಲ, ಪ್ರತಿಭಟನಾ ಪ್ರಹಸನ, ಕಾವೇರಿ ನಿರ್ವಹಣಾ ಮಂಡಳಿ ರಚನೆ, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದವರೆಗೂ ಮುಂದುವರೆದಿತ್ತು. 
ಅತ್ತ ತಮಿಳುನಾಡಿನ ಎಐಎಡಿಎಂಕೆ ಮತ್ತು ಡಿಎಂಕೆ ಸದಸ್ಯರು ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರೆ, ಇತ್ತ ಆಂಧ್ರ ಪ್ರದೇಶದ ಸಂಸದರು ವಿಶೇಷ ಸ್ಥಾನಮಾನಕ್ಕೆ ಆಗ್ರಸಿಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಮತ್ತೊಂದೆಡೆ ಎಸ್ ಎಸ್ ಎಸ್ ಟಿ ಗದ್ದಲ ಕೂಡ ಸಂಸತ್ ಕಲಾಪಕ್ಕೆ ಅಡ್ಡಿಯಾಗಿತ್ತು. ಏತನ್ಮಧ್ಯೆ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧಅವಿಶ್ವಾಸ ನಿರ್ಣಯ ಮಂಡಿಸಲವು ಮುಂದಾಗಿದ್ದಾಗ ಇದೊಂದೇ ವಿಚಾರ ಬರೊಬ್ಬರಿ ಒಂದು ವಾರದ ಕಲಾಪವನ್ನು ನುಂಗಿ ಹಾಕಿತ್ತು.
ಒಟ್ಟಾರೆ ವಿಪಕ್ಷಗಳ ಗದ್ದಲ ಮತ್ತೊಮ್ಮೆ ಸಂಸತ್ ಕಲಾಪವನ್ನು ನುಂಗಿ ಹಾಕಿದ್ದು, ಸಂಸತ್ ಅಮೂಲ್ಯ ಸಮಯ ಮತ್ತು ಜನರ ಹಣವನ್ನು ವ್ಯರ್ಥ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT