ರಂದೀಪ್ ಸಿಂಗ್ ಸುರ್ಜೇವಾಲಾ 
ದೇಶ

ಯುದ್ಧ ಆರಂಭವಾಗುವ ಮುನ್ನವೇ ಅಮಿತ್ ಶಾ ಸೋತಿದ್ದಾರೆ: ಸುರ್ಜೇವಾಲಾ

ಪ್ರತಿಪಕ್ಷಗಳನ್ನು ಪ್ರಾಣಿಗಳಿಗೆ ಹೋಲಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು...

ಚಂಡೀಗಢ: ಪ್ರತಿಪಕ್ಷಗಳನ್ನು ಪ್ರಾಣಿಗಳಿಗೆ ಹೋಲಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಯುದ್ಧ ಆರಂಭವಾಗುವ ಮುನ್ನವೇ ಶಾ ಸೋತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಅಮಿತ್ ಶಾ ಹೇಳಿಕೆ ಬಗ್ಗೆ ಎಎನ್ಐ ಪ್ರತಿಕ್ರಿಯಿಸಿದ ಸುರ್ಜೇವಾಲಾ, ಪ್ರತಿಪಕ್ಷಗಳ ವಿರುದ್ಧ ಶಾ ಬಳಸಿದ ಪದಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದಿದ್ದಾರೆ.
ನಮ್ಮ ಸಂಸ್ಕೃತಿಯಲ್ಲಿ ಮನುಷ್ಯ ಮತ್ತು ಆತನ ಸ್ವಭಾವವನ್ನು ವಿವರಿಸಲು ಬಳಸುವ ಪದಗಳು ಬೇರೆಯೇ ಇರುತ್ತವೆ. ವಿರೋಧ ಪಕ್ಷಗಳನ್ನು ಪ್ರಾಣಿಗಳಿಗೆ ಹೋಲಿಸುವ ಮೂಲಕ ಯುದ್ಧ ಶುರುವಾಗುವ ಮುನ್ನವೇ ಅಮಿತ್ ಶಾ ಯುದ್ದ ಸೋತಿರುವುದನ್ನು ತೋರಿಸುತ್ತದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.
ಇಂದು ಬೆಳಗ್ಗೆ ಮುಂಬೈನಲ್ಲಿ ಬಿಜೆಪಿಯ 38ನೇ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಮೋದಿ ಪ್ರವಾಹದ ವಿರುದ್ಧ ಹಾವು, ಮುಂಗುಸಿ, ಬೆಕ್ಕು, ನಾಯಿ, ಚಿರತೆ ಮತ್ತು ಸಿಂಹಗಳೆಲ್ಲಾ ಒಂದಾಗಿವೆ ಎಂದು ಪ್ರತಿಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT