ಸುಪ್ರೀಂ ಕೋರ್ಟ್ 
ದೇಶ

ಅಯೋಧ್ಯೆ ವಿವಾದ ಮುಸ್ಲಿಂ ಬಹುಪತ್ನಿತ್ವಕ್ಕಿಂತ ದೊಡ್ಡದು, ಉನ್ನತ ಪೀಠಕ್ಕೆ ವರ್ಗಾಯಿಸಲು ಮುಸ್ಲಿಂ ಸಮುದಾಯ ಮನವಿ

ಮುಸ್ಲೀಮರಲ್ಲಿರುವ ಬಹುಪತ್ನಿತ್ವ ಕ್ಕಿಂತಲೂ ಅಯೋಧ್ಯೆ ರಾಮಜನ್ಮಭೂಮಿ ವಿವಾದ ದೊಡ್ಡದು ಎಂದು ಉಲ್ಲೇಕಿಸಿದ್ದ ಮನವಿಯೊಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ಸಲ್ಲಿಕೆಯಾಗಿದೆ.

ನವದೆಹಲಿ: ಮುಸ್ಲೀಮರಲ್ಲಿರುವ ಬಹುಪತ್ನಿತ್ವ ಕ್ಕಿಂತಲೂ ಅಯೋಧ್ಯೆ ರಾಮಜನ್ಮಭೂಮಿ ವಿವಾದ ದೊಡ್ಡದು ಎಂದು ಉಲ್ಲೇಖಿಸಿದ್ದ ಮನವಿಯೊಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ಸಲ್ಲಿಕೆಯಾಗಿದೆ.
ಮುಸ್ಲಿಂ ಸಮುದಾಯದ ಪರ ವಕೀಲರಾದ ರಾಜೀವ್ ಧವನ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ಸಾವಿಧಾನಿಕ ಪೀಠದ ಮುಂದೆ ಈ ಮನವಿ ಮಾಡಿದ್ದಾರೆ. 
"ಅಯೋಧ್ಯೆ ಭೂ ವಿವಾದವು ಮುಸ್ಲಿಮರಲ್ಲಿ ಬಹುಪತ್ನಿತ್ವಕ್ಕಿಂತ ಹೆಚ್ಚು ಮುಖ್ಯವಾಗಿದೆ ಮತ್ತು ಇಡೀ ರಾಷ್ಟ್ರವು ಉತ್ತರವನ್ನು ಬಯಸಿದೆ. ಈ ಕಾರಣಕ್ಕೆ ವಿಚಾರಣೆಯನ್ನು ಉನ್ನತ ನ್ಯಾಯಪೀಠಕ್ಕೆ ವರ್ಗಾಯಿಸಬೇಕು" ಎಂದು ಧವನ್ ನ್ಯಾಯಪೀಠಕ್ಕೆ ತಿಳಿಸಿದ್ದಾರೆ. 
ಮನವಿ ಆಲಿಸಿದ ನ್ಯಾಯಪೀಠವು ಎಲ್ಲಾ ಪಕ್ಷಗಳ ವಿಚಾರಣೆಗಳನ್ನು ಕೇಳಿದ ಬಳಿಕ ಪ್ರಕರಣವನ್ನು ಉನ್ನತ ಪೀಠಕ್ಕೆ ವರ್ಗಾಯಿಸಲುವ ಕುರಿತಂತೆ ನಿರ್ಧಾರ ತೆಗೆದುಕೊಲ್ಳಲಿದೆ ಎಂದು ತಿಳಿಸಿದೆ.
ನಾಲ್ಕು ನಾಗರಿಕ ಪ್ರಕರಣಗಳ ವಿಚಾರಣೆ ನಡೆಸಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾದ ಒಟ್ಟು  14 ಮನವಿಗಳನ್ನು ಸುಪ್ರೀಂ ಕೋರ್ಟ್ ನ ವಿಶೇಷ ಪೀಠ ಆಲಿಸಲಿದೆ.
ಈ ಹಿಂದಿನ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದ ಸಂಬಂಧ ಮೂಲ ಮೊಕದ್ದಮೆಗಳಿಗೆ ಸಂಬಂಧಿಸಿ ಮಾತ್ರವೇ ಪಕ್ಷಗಳು ತಮ್ಮ ವಾದ ಮಂಡನೆಗೆ ಅವಕಾಶ ನಿಡಲಾಗುವುದು ಎಂದಿದ್ದು ಮಧ್ಯಸ್ಥಿಕೆದಾರರಿಂದ ಸಲ್ಲಿಕೆಯಾಗಿದ್ದ ಒಟ್ಟು 32 ಅರ್ಜಿಗಳನ್ನು ವಜಾಗೊಳಿಸಿತ್ತು.
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಮೂವರು ನ್ಯಾಯಾಧೀಶರ ಪೀಠವು ವಿವಾದಿತ ಭೂಮಿಯು ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರಾ ಮತ್ತು ರಾಮ್ ಲಾಲ್ಲಾ - ಈ ಪಕ್ಷಗಳ ನಡುವೆ ವಿಭಜನೆಯಾಗಬೇಕೆಂದು ಆದೇಶಿಸಿತ್ತು..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT