ಕಾಶ್ಮೀರದಲ್ಲಿ ಯುವಕನ ಶಿರಚ್ಛೇದನ 
ದೇಶ

ಕಾಶ್ಮೀರದಲ್ಲಿ ಯುವಕನ ಶಿರಚ್ಛೇದನ

ಕಾಶ್ಮೀರದಲ್ಲಿ ಭಯೋತ್ಪಾದಕನಿಂದ ಅಪಹರಣಕ್ಕೊಳಗಾಗಿದ್ದ ಯುವಕನ ಶವ ಶಿರಚ್ಛೇದನಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕನಿಂದ ಅಪಹರಣಕ್ಕೊಳಗಾಗಿದ್ದ ಯುವಕನ ಶವ ಶಿರಚ್ಛೇದನಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. 
ಬಂಡಿಪೋರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 25 ವರ್ಷದ ಯುವಕ ಮನ್ಜೋರ್ ಅಹ್ಮದ್ ಭಟ್ ಮೃತ ಯುವಕನಾಗಿದ್ದಾನೆ.  ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯವರು ಯುವಕನನ್ನು ಹಾಗೂ ಆತನ ತಂದೆ ಅಬ್ದುಲ್ ಗಫಾರ್ ಭಟ್ ನ್ನು ಅಪಹರಣ ಮಾಡಿದ್ದರು. 
ಭಯೋತ್ಪಾದಕರ ಗುಂಡೇಟಿಗೆ ಗುರಿಯಾದರೂ ಆ ಯುವಕನ ತಂದೆ ಉಗ್ರರಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರು. ಉಗ್ರರಿಂದ ಪಾರಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈ ನಡುವೆ ಯುವಕನ ಶವ ಶಿರಚ್ಛೇದಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. 
ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಾಗೂ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಈ ಅಮಾನವೀಯ ಕೃತ್ಯವನ್ನು ಖಂಡಿಸಿದ್ದಾರೆ. ಪ್ರತ್ಯೇಕತಾವಾದಿಗಳು ಈ ಘಟನೆಯನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡದೇ ಇರುವುದು ನನಗೆ ಅಚ್ಚರಿ ಮೂಡಿಸಿಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT