ಕಾಶ್ಮೀರದಲ್ಲಿ ಯುವಕನ ಶಿರಚ್ಛೇದನ 
ದೇಶ

ಕಾಶ್ಮೀರದಲ್ಲಿ ಯುವಕನ ಶಿರಚ್ಛೇದನ

ಕಾಶ್ಮೀರದಲ್ಲಿ ಭಯೋತ್ಪಾದಕನಿಂದ ಅಪಹರಣಕ್ಕೊಳಗಾಗಿದ್ದ ಯುವಕನ ಶವ ಶಿರಚ್ಛೇದನಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕನಿಂದ ಅಪಹರಣಕ್ಕೊಳಗಾಗಿದ್ದ ಯುವಕನ ಶವ ಶಿರಚ್ಛೇದನಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. 
ಬಂಡಿಪೋರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 25 ವರ್ಷದ ಯುವಕ ಮನ್ಜೋರ್ ಅಹ್ಮದ್ ಭಟ್ ಮೃತ ಯುವಕನಾಗಿದ್ದಾನೆ.  ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯವರು ಯುವಕನನ್ನು ಹಾಗೂ ಆತನ ತಂದೆ ಅಬ್ದುಲ್ ಗಫಾರ್ ಭಟ್ ನ್ನು ಅಪಹರಣ ಮಾಡಿದ್ದರು. 
ಭಯೋತ್ಪಾದಕರ ಗುಂಡೇಟಿಗೆ ಗುರಿಯಾದರೂ ಆ ಯುವಕನ ತಂದೆ ಉಗ್ರರಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರು. ಉಗ್ರರಿಂದ ಪಾರಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈ ನಡುವೆ ಯುವಕನ ಶವ ಶಿರಚ್ಛೇದಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. 
ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಾಗೂ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಈ ಅಮಾನವೀಯ ಕೃತ್ಯವನ್ನು ಖಂಡಿಸಿದ್ದಾರೆ. ಪ್ರತ್ಯೇಕತಾವಾದಿಗಳು ಈ ಘಟನೆಯನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡದೇ ಇರುವುದು ನನಗೆ ಅಚ್ಚರಿ ಮೂಡಿಸಿಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT