ಉತ್ತರ ಪ್ರದೇಶದ ಮತ್ತೆರಡು ಕಡೆ ಅಂಬೇಡ್ಕರ್ ಪ್ರತಿಮೆಗಳು ಭಗ್ನ 
ದೇಶ

ಉತ್ತರ ಪ್ರದೇಶದ ಮತ್ತೆರಡು ಕಡೆ ಅಂಬೇಡ್ಕರ್ ಪ್ರತಿಮೆಗಳು ಭಗ್ನ

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು ಇದೀಗ ಉತ್ತರ ಪ್ರದೇಶದ ಬುಡೌನ್ ಹಾಗೂ ಬಲಿಯಾ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರಕರಣ ನಡೆದಿದೆ.

ಬುಡೌನ್(ಉತ್ತರ ಪ್ರದೇಶ): ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು ಇದೀಗ ಉತ್ತರ ಪ್ರದೇಶದ ಬುಡೌನ್ ಹಾಗೂ ಬಲಿಯಾ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರಕರಣ ನಡೆದಿದೆ. 
ನಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಲಿಯಾ ಜಿಲ್ಲೆ ದೇದ್ವಾರಿ ಗ್ರಾಮದಲ್ಲಿರುವ ಅಂಬೇಡ್ಕರ್ ಪ್ರತಿಮೆಯ  ಬಲಗೈ, ಕಾಲು ಮತ್ತು ತಲೆ ಭಾಗ ಹಾನಿಗೊಂಡಿದೆ ಎಂದು ಪೊಲೀಸ್ ಉಸ್ತುವಾರಿ ರಾಮ್ ದಿನೇಶ್ ತಿವಾರಿ ತಿಳಿಸಿದ್ದಾರೆ.
ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು ಉಪ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಅವದೆಶ್ ಚೌಧರಿ ಅವರು ಸ್ಥಳಕ್ಕೆ ಹೆಚ್ಚುವರಿ ಪೋಲೀಸ್ ಪಡೆಗಳನ್ನು ರವಾನಿಸಿದ್ದಾರೆ. ಅಲ್ಲದೆ ಖುದ್ದಾಗಿ ತಾವು ಸಹ ಆಗಮಿಸಿ ಸುತ್ತ ಮುತ್ತಲ ಜನರನ್ನು ಸ್ಥಳಾಂತರಗೊಳಿಸಿದ್ದಾರೆ.
ಬುಡೌನ್ ಜಿಲ್ಲೆಯ ದುಗ್ರಿಯಾ ಗ್ರಾಮದಲ್ಲಿಅಂಬೇಡ್ಕರ್ ಉದ್ಯಾನವನದಲ್ಲಿರುವ  ಪ್ರತಿಮೆ ಹಾನಿಗೊಂಡಿದ್ದು ಹಾನಿಗೊಂಡ ವಿಗ್ರಹವನ್ನು ಬಟ್ಟೆಯಿಂದ ಮುಚ್ಚಿ, ಘಟನೆಯ ತನಿಖೆ ಆರಂಭಿಸಿರುವುದಾಗಿ ಪೊಲೀಸ್ ಅಧೀಕ್ಷಕ ಕಮಲ್ ಕಿಶೋರ್ ಹೇಳಿದ್ದಾರೆ
ಸ್ಥಳದಲ್ಲಿ ಹೆಚ್ಚುವರಿ ಪೋಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಎಸ್ಪಿಗಳಿಗೆ ತಮ್ಮ ಜಿಲ್ಲೆಗಳಲ್ಲಿ ಸ್ಥಾಪಿಸಿದ ಪ್ರತಿಮೆಗಳ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಆದೇಶಿಸಿದ್ದಾರೆ..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT