ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿ 
ದೇಶ

ವಿಪಕ್ಷಗಳನ್ನು ಪ್ರಾಣಿಗೆ ಹೋಲಿಕೆ: ಅಮಿತ್ ಶಾ ವಿರುದ್ಧ ಬಿಎಸ್'ಪಿ ತೀವ್ರ ಕಿಡಿ

ವಿರೋಧ ಪಕ್ಷಳನ್ನು ಪ್ರಾಣಿಗಳಿಗೆ ಹೋಲಿಕೆ ಮಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಕ್ಷ ಶನಿವಾರ ತೀವ್ರವಾಗಿ ಕಿಡಿಕಾರಿದೆ...

ಲಖನೌ; ವಿರೋಧ ಪಕ್ಷಳನ್ನು ಪ್ರಾಣಿಗಳಿಗೆ ಹೋಲಿಕೆ ಮಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಕ್ಷ ಶನಿವಾರ ತೀವ್ರವಾಗಿ ಕಿಡಿಕಾರಿದೆ. 
ಅಮಿತ್ ಶಾ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿಯವರು, ಗೋರಖ್ಪುರ ಮತ್ತು ಫುಲ್ಪುರ್ ನಲ್ಲಿ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಜನರು ಈಗಾಗಲೇ ಅಪಮಾನ ಮತ್ತು ಸಂಘಿ ಭಾಷೆ ಬಳಸುತ್ತಿರುವ ಬಿಜೆಪಿಯವರಿಗೆ ಪಾಠ ಕಲಿಸಿದ್ದಾರೆಂದು ಹೇಳಿದ್ದಾರೆ. 
ತಮ್ಮ ಹೇಳಿಕೆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅನುಯಾಯಿ ಅಮಿತ್ ಶಾ ಅವರ ನಾಯಕತ್ವದಲ್ಲಿ ಬಿಜೆಪಿ ಪಕ್ಷ ನೆಲ ಕಚ್ಚಿದೆ ಎಂಬುದು ಸಾಬೀತಾಗಿದೆ. ಹೊಸಲು ಮತ್ತು ಅಸಮರ್ಪಕ ಭಾಷೆ ಮೂಲಕ ಬಿಜೆಪಿ ನವಭಾರತವನ್ನು ನಿರ್ಮಾಣ ಮಾಡಲಿದೆಯೇ?...ಭಾರತದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಕ್ಕಿದು ಹೊಂದುವುದೇ? ಎಂದು ಪ್ರಶ್ನಿಸಿದ್ದಾರೆ. 
ಬಿಜೆಪಿಯವರು ತಮ್ಮ ದುರಂಹಕಾರ, ನಿರ್ಲಕ್ಷ್ಯದ ಮೂಲಕ ಟಿಡಿಪಿಯಿಂದ ಅವಿಶ್ವಾಸ ನಿರ್ಣಯ ಮಂಡನೆಯನ್ನು ಎದುರಿಸಬೇಕಾಗಿ ಬಂದಿದೆ. ಸಂಸತ್ತಿನ ಕಾರ್ಯ ಚಟುವಟಿಕೆಗಳಿಗೆ ಅಡ್ಡಿಯುಂಟು ಮಾಡಲು ಅಸಮರ್ಪಕ ಹಾಗೂ ಅನೈತಿಕ ತಂತ್ರಗಳನ್ನು ಬಿಜೆಪಿ ಬಳಕೆ ಮಾಡಿದೆ. ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೆ, ಬ್ಯಾಂಕ್ ವಂಚನೆ, ಭ್ರಷ್ಟಾಚಾರ, ರೈತ ವಿರೋಧಿ, ಅಭಿವೃದ್ಧಿ ವಿರೋಧಿ ನೀತಿಗಳು ಬಹಿರಂಗಗೊಳ್ಳುತ್ತದೆ ಎಂದು ಈ ರೀತಿ ಮಾಡಿದ್ದಾರೆ. ಆಡಳಿತಾರೂಢ ಪಕ್ಷ ಬಜೆಟ್ ಅಧಿವೇಶ ನಡೆಯಲು ಬಿಡದೇ ಇರುವುದು ದುರಾದೃಷ್ಟಕರ ಸಂಗತಿ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT