ಗುಜರಾತ್ ರಾಜ್ಯದ ವಡಗಾಂ ಶಾಸಕ ಜಿಗ್ನೇಶ್ ಮೇವಾನಿ 
ದೇಶ

ಪ್ರಧಾನಿ ಮೋದಿ ಕುರಿತು ಹೇಳಿಕೆ; ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲು

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ವಡಗಾಂ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಶನಿವಾರ ತಿಳಿತುಬಂದಿದೆ...

ಚಿತ್ರದುರ್ಗ; ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ವಡಗಾಂ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಶನಿವಾರ ತಿಳಿತುಬಂದಿದೆ. 
ಉದ್ದೇಶಪೂರ್ವಕವಾಗಿ ದ್ವೇಷ ಭಾವನೆ ಮೂಡುವಂತೆ ಪ್ರಚೋದನಕಾರಿ ಹೇಳಿಕೆ ನೀಡಿ ಗಲಬೆ ಸೃಷ್ಟಿಸಲು ಮೇವಾನಿಯವರು ಮುಂದಾಗಿದ್ದಾರೆಂದು ಆರೋಪಿಸಿ ಜಯಂತ್ ಎಂಬುವವರು ಚಿತ್ರದುರ್ಗ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ವರದಿಗಳು ತಿಳಿಸಿವೆ. 
ಚುನಾವಣೆಯ ನಿಬಂಧನೆಗಳಿಗೆ ಒಳಪಡಿಸಿ ಸಂವಾದ ನಡೆಸುವಂತೆ ಅನುಮತಿ ನೀಡಲಾಗಿತ್ತು. ಆದರೆ, ಆ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ. ಆದ ಕಾರಣ ಕಾರ್ಯಕ್ರಮ ಆಯೋಜನೆಗೆ ಕಾರಣರಾದ ಕೋಮು ಸೌಹಾರ್ದ ವೇದಿಕೆಯ ಟಿ.ಷಫಿವುಲ್ಲಾ ವಿರುದ್ಧ ಕೂಡ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 
ಪ್ರಸ್ತುತ ಮೇವಾನಿ ವಿರುದ್ಧ ಭಾರತೀಯ ದಂಡ ಸಂಹಿತೆ 153, 188, 117 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ  ಎಂದು ತಿಳಿದುಬಂದಿದೆ. 
ಚಿತ್ರದುರ್ಗ ಕಾರ್ಯಕ್ರಮವೊಂದರಲ್ಲಿ ನಿನ್ನೆಯಷ್ಟೇ ಮಾತನಾಡಿದ್ದ ಮೇವಾನಿಯವರು, ಯುವಕರ ಪಾತ್ರ ಅತ್ಯಂತ ಪ್ರಮುಖವಾದದ್ದು. ಏ.15ರಂದು ಮೋದಿಯವರು ಬೆಂಗಳೂರಿಗೆ ಬಂದಾಗ ಸಭೆಯನ್ನು ಧ್ವಂಸಗೊಳಿಸಿ. ಕುರ್ಚಿಗಳನ್ನು ಎಸೆಯಿರಿ. ಪ್ರತೀವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದಿರಿ ಏನಾಯಿತು ಎಂದು ಪ್ರಶ್ನಿಸಿ. ಉತ್ತರ ಕೊಡುವಲ್ಲಿ ಮೋದಿ ವಿಫಲವಾದರೆ, ಹಿಮಾಲಯದಲ್ಲಿ ಹೋಗಿ ಮಲಗಲು ಹೇಳಿ ಇಲ್ಲವೇ ರಾಮ ಮಂದಿನರದಲ್ಲಿ ಗಂಟೆ ಹೊಡೆಯುವುದಕ್ಕೆ ಹೇಳಿ ಎಂದು ತಿಳಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT