ಗುಜರಾತ್ ರಾಜ್ಯದ ವಡಗಾಂ ಶಾಸಕ ಜಿಗ್ನೇಶ್ ಮೇವಾನಿ 
ದೇಶ

ಪ್ರಧಾನಿ ಮೋದಿ ಕುರಿತು ಹೇಳಿಕೆ; ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲು

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ವಡಗಾಂ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಶನಿವಾರ ತಿಳಿತುಬಂದಿದೆ...

ಚಿತ್ರದುರ್ಗ; ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ವಡಗಾಂ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಶನಿವಾರ ತಿಳಿತುಬಂದಿದೆ. 
ಉದ್ದೇಶಪೂರ್ವಕವಾಗಿ ದ್ವೇಷ ಭಾವನೆ ಮೂಡುವಂತೆ ಪ್ರಚೋದನಕಾರಿ ಹೇಳಿಕೆ ನೀಡಿ ಗಲಬೆ ಸೃಷ್ಟಿಸಲು ಮೇವಾನಿಯವರು ಮುಂದಾಗಿದ್ದಾರೆಂದು ಆರೋಪಿಸಿ ಜಯಂತ್ ಎಂಬುವವರು ಚಿತ್ರದುರ್ಗ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ವರದಿಗಳು ತಿಳಿಸಿವೆ. 
ಚುನಾವಣೆಯ ನಿಬಂಧನೆಗಳಿಗೆ ಒಳಪಡಿಸಿ ಸಂವಾದ ನಡೆಸುವಂತೆ ಅನುಮತಿ ನೀಡಲಾಗಿತ್ತು. ಆದರೆ, ಆ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ. ಆದ ಕಾರಣ ಕಾರ್ಯಕ್ರಮ ಆಯೋಜನೆಗೆ ಕಾರಣರಾದ ಕೋಮು ಸೌಹಾರ್ದ ವೇದಿಕೆಯ ಟಿ.ಷಫಿವುಲ್ಲಾ ವಿರುದ್ಧ ಕೂಡ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 
ಪ್ರಸ್ತುತ ಮೇವಾನಿ ವಿರುದ್ಧ ಭಾರತೀಯ ದಂಡ ಸಂಹಿತೆ 153, 188, 117 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ  ಎಂದು ತಿಳಿದುಬಂದಿದೆ. 
ಚಿತ್ರದುರ್ಗ ಕಾರ್ಯಕ್ರಮವೊಂದರಲ್ಲಿ ನಿನ್ನೆಯಷ್ಟೇ ಮಾತನಾಡಿದ್ದ ಮೇವಾನಿಯವರು, ಯುವಕರ ಪಾತ್ರ ಅತ್ಯಂತ ಪ್ರಮುಖವಾದದ್ದು. ಏ.15ರಂದು ಮೋದಿಯವರು ಬೆಂಗಳೂರಿಗೆ ಬಂದಾಗ ಸಭೆಯನ್ನು ಧ್ವಂಸಗೊಳಿಸಿ. ಕುರ್ಚಿಗಳನ್ನು ಎಸೆಯಿರಿ. ಪ್ರತೀವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದಿರಿ ಏನಾಯಿತು ಎಂದು ಪ್ರಶ್ನಿಸಿ. ಉತ್ತರ ಕೊಡುವಲ್ಲಿ ಮೋದಿ ವಿಫಲವಾದರೆ, ಹಿಮಾಲಯದಲ್ಲಿ ಹೋಗಿ ಮಲಗಲು ಹೇಳಿ ಇಲ್ಲವೇ ರಾಮ ಮಂದಿನರದಲ್ಲಿ ಗಂಟೆ ಹೊಡೆಯುವುದಕ್ಕೆ ಹೇಳಿ ಎಂದು ತಿಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT