ದೇಶ

ಇಂದ್ರಾಣಿ ಮುಖರ್ಜಿ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

Manjula VN
ಮುಂಬೈ: ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿಯವರ ಸ್ಥಿತಿ ಗಂಭೀರವಾಗಿದ್ದು, ಮುಂಬೈ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 
ಇಂದ್ರಾಣಿಯವರು ಆರೋಗ್ಯ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 
ಬೈಕುಲ್ಲಾ ಜೈಲಿನಲ್ಲಿರುವ ಇಂದ್ರಾಣಿಯವರನ್ನು ಆ್ಯಂಬುಲೆನ್ಸ್ ಮೂಲಕವೇ ಕರೆದುಕೊಂಡು ಹೋಗಿ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 
2012ರಲ್ಲಿ ಶೀನಾ ಪೋರ ಪ್ರಕರಣದಲ್ಲಿ ಇಂದ್ರಾಣಿಯವರು ಜೈಲು ಪಾಲಾಗಿದ್ದರು. ಪ್ರಕರಣದಲ್ಲಿ ಇಂದ್ರಾಣಿ ಪತಿ ಪೀಟರ್ ಮುಖರ್ಜಿ ಹಾಗೂ ಮಾಜಿ ಪತಿ ಸಂಜೀವ್ ಖನ್ನಾ ಕೂಡ ಪ್ರಕರಣ ಆರೋಪಿಗಳಾಗಿದ್ದಾರೆ. 
SCROLL FOR NEXT