ಕರ್ನಾಟಕದ ಬಳಿಕ ಮಹಾರಾಷ್ಟ್ರ ಲಿಂಗಾಯತರಿಂದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಪಟ್ಟು 
ದೇಶ

ಕರ್ನಾಟಕದ ಬಳಿಕ ಮಹಾರಾಷ್ಟ್ರ ಲಿಂಗಾಯತರಿಂದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಪಟ್ಟು

ಲಿಂಗಾಯತಸಮುದಾಯಕ್ಕೆ ಸಂವಿಧಾನಿಕ ಮಾನ್ಯತೆ ನಿಡಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಲಿಂಗಯಾಟ್ ಕೋಆರ್ಡಿನೇಶನ್ ಸಮಿತಿಯು...........

ಔರಂಗಾಬಾದ್(ಮಹಾರಾಷ್ಟ್ರ): ಲಿಂಗಾಯತಸಮುದಾಯಕ್ಕೆ ಸಂವಿಧಾನಿಕ ಮಾನ್ಯತೆ ನಿಡಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಲಿಂಗಯಾಟ್ ಕೋ-ಆರ್ಡಿನೇಶನ್ ಸಮಿತಿಯು ಭಾನುವಾರ ಮಹಾರಾಷ್ಟ್ರದ ಔರಂಗಾಬಾದ್ ವಿಬಾಗೀಯ ಆಯುಕ್ತರ ಕಛೇರಿ ಎದುರು ಪ್ರತಿಭಟನಾ ರ್ಯಾಲಿ ನಡೆಸಿದೆ.
ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ.
103 ವರ್ಷದ ಶಿವಲಿಂಗ ಶಿವಾಚಾರ್ಯ ಮಹಾರಾಜ ನೇತೃತ್ವದ ಲಿಂಗಾಯತ ಮಹಾಮೋರ್ಚಾ ಜತೆಗೆ ಹಲವಾರು ರಾಜ್ಯಗಳಿಂದ ಆಗಮಿಸಿದ್ದ ಧಾರ್ಮಿಕ ಮುಖಂಡರು ಈ ರ್ಯಾಲಿಯಲ್ಲಿ ಭಾಗವಹಿಸಿದ್ದರು.
"ಲಿಂಗಾಯತ ಧರ್ಮಕ್ಕೆ ಸರ್ಕಾರ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ" ಎಂದು ಶಿವಲಿಂಗ ಶಿವಾಚಾರ್ಯ ಮಹಾರಾಜ ಹೇಳಿದ್ದಾರೆ. ಲಿಂಗಾಯತ ಧರ್ಮ ಭಾರತದ ಪುರಾತನ ಧರ್ಮಗಳಲ್ಲಿ ಒಂದು, ಮಹಾರಾಷ್ಟ್ರದಲ್ಲಿ ಈ ಧರ್ಮದ ಸುಮಾರು 4 ಕೋಟಿ ಅನುಯಾಯಿಗಳಿದ್ದಾರೆ ಎಂದು ಅವರು ಹೇಳಿದರು.
ಲಿಂಗಾಯತ ಸಹಕಾರ ಸಮಿತಿಯ ರಾಷ್ಟ್ರೀಯ ಸಂಚಾಲಕ ಅವಿನಾಶ್ ಭೋಸಿಕಾರ್, ಜಿಲ್ಲಾ ಸಹರಾಕ್ರಿ ಸಂಚಾಲಕ ಪ್ರದೀಪ್ ಬರಾಂಡೇ, ನಗರದ ಮುಖ್ಯಸ್ಥರಾದ ದೈನೇಶ್ವರ್ ಖಂಡ್ರೆ ಅಪ್ಪಾ ಇತರ ರಾಜಕೀಯ ಪಕ್ಷಗಳ ನಾಯಕರು ಸಹ ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಈ ಬಳಿಕ ನಿಯೋಗವು ವಿಷನಲ್ ಕಮಿಷನರ್, ಡಾ. ಪುರುಷೋತ್ತಮ್ ಭಪಕರ್ ಅವರಿಗೆ ತಮ್ಮ ಮನವಿ ಪತ್ರವನ್ನು ಸಲ್ಲಿಸಿದೆ.
ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಚ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ರಚನೆಯಾಗಿದ್ದ ಏಳು ಸದಸ್ಯರ ಸಮಿತಿಯು ಮಾರ್ಚ್ 2, 2018 ರಂದು ತನ್ನ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದ್ದು "ಕರ್ನಾಟಕದಲ್ಲಿ ಲಿಂಗಾಯತರನ್ನು ಧಾರ್ಮಿಕ ಅಲ್ಪಸಂಖ್ಯಾತರಾಗಿ ಪರಿಗಣಿಸಬಹುದು" ಎಂದು ತಿಳಿಸಿತ್ತು.
ಇದಾಗಿ ಮಾ.23 ರಂದು ಅವಿನಾಶ್ ಭೋಸಿಕಾರ್ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಬೇಕೆಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?