ಜಯಲಲಿತಾ 
ದೇಶ

ಕಾವೇರಿ ವಿವಾದ: ಆಸ್ಪತ್ರೆಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದರು ಜಯಲಲಿತಾ; ತ.ನಾಡು ಮಾಜಿ ಮುಖ್ಯ ಕಾರ್ಯದರ್ಶಿ

ಅನಾರೋಗ್ಯಕ್ಕೀಡಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಜಯಲಲಿತಾ ಅವರು ಆಸ್ಪತ್ರೆಯ ಹಾಸಿಗೆಯ ಮೇಲೆಯೇ ಮಲಗಿ ಕಾವೇರಿ ವಿಚಾರ ಕುರಿತು ಭಾವನಾತ್ಮಕವಾಗಿ ಮಾತನಾಡಿದ್ದರು ಎಂದು ತಮಿಳುನಾಡು ರಾಜ್ಯ ಮಾಜಿ ಮುಖ್ಯ ಕಾರ್ಯದರ್ಶಿ...

ಚೆನ್ನೈ; ಅನಾರೋಗ್ಯಕ್ಕೀಡಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಜಯಲಲಿತಾ ಅವರು ಆಸ್ಪತ್ರೆಯ ಹಾಸಿಗೆಯ ಮೇಲೆಯೇ ಮಲಗಿ ಕಾವೇರಿ ವಿಚಾರ ಕುರಿತು ಭಾವನಾತ್ಮಕವಾಗಿ ಮಾತನಾಡಿದ್ದರು ಎಂದು ತಮಿಳುನಾಡು ರಾಜ್ಯ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ರಾಮಮೋಹನ್ ರಾವ್ ಅವರು ತನಿಖಾ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ. 
ಅಪೋಲೋ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿದ್ದ ಜಯಲಲಿತಾ ಅವರು ಮಲಿಗಿಕೊಂಡೇ 2 ಗಂಟೆಗಳ ಕಾಲ ಕಾವೇರಿ ವಿಚಾರ ಸಂಬಂಧ ಮಾತುಕತೆ ನಡೆಸಿದ್ದರು. ಈ ವೇಳೆ ಭಾವನಾತ್ಮಕವಾಗಿ ಮಾತನಾಡಿ, ಕೆಲ ಸೂಚನೆಗಳನ್ನು ನೀಡಿದ್ದರು. 
2016 ಸೆ.27ರಂದು ಸಂಜೆ 4 ರಿಂದ 6 ಗಂಟೆಯವರೆಗೂ ತಾವೂ ಸೇರಿದಂತೆ ಸರ್ಕಾರಿ ಕಾರ್ಯದರ್ಶಿಗಳಿಗೆ ಜಯಲಲಿತಾ ಸೂಚನೆ ನೀಡಿದ್ದರು ಎಂದು ಜಯಲಲಿತಾ ಸಾವಿನ ತನಿಖೆ ನಡೆಸುತ್ತಿರುವ ಸಮಿತಿಯೊಂದರ ಮುಂದೆ ರಾಮ್ ಮೋಹನ್ ರಾವ್ ಅವರು ಹೇಳಿಕೆ ನೀಡಿದ್ದಾರೆ. 
ಸುಪ್ರೀಂಕೋರ್ಟ್ ನಲ್ಲಿ ಯಾವ ನಿಲುವು ತಳೆಯಬೇಕು ಮತ್ತು ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ವಾದ ಮಂಡಿಸಬೇಕು ಎದು ಜಯಲಲಿತಾ ಅವರು ನಮಗೆ ತಿಳಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ. 
ಈ ಮೂಲಕ ಆಸ್ಪತ್ರೆಯಲ್ಲಿದ್ದ ವೇಳೆ ಅವರು ಸಂಪೂರ್ಣವಾಗಿ ಮಾತನಾಡುವ ಸ್ಥಿತಿಯಲ್ಲಿದ್ದು ಎಂಬುದು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!