ಸಾಂದರ್ಭಿಕ ಚಿತ್ರ 
ದೇಶ

ಶಿವಸೇನಾ ನಾಯಕರ ಹತ್ಯೆ: ಎನ್ ಸಿಪಿ ಮುಖಂಡ ಸಂಗ್ರಾಮ್ ಸಹಿತ ನಾಲ್ವರ ಬಂಧನ

ಶಿವಸೇನೆಯ ಸ್ಥಳೀಯ ನಾಯಕರಿಬ್ಬರ ಹತ್ಯೆ ಪ್ರಕರಣ ಸಂಬಂಧಿಸಿ ಪೋಲೀಸರು ಎನ್ ಸಿಪಿ ನಾಯಕ ಸಂಗ್ರಾಮ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಮುಂಬೈ: ಶಿವಸೇನೆಯ ಸ್ಥಳೀಯ ನಾಯಕರಿಬ್ಬರ ಹತ್ಯೆ ಪ್ರಕರಣ ಸಂಬಂಧಿಸಿ ಪೋಲೀಸರು ಎನ್ ಸಿಪಿ ನಾಯಕ ಸಂಗ್ರಾಮ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೆ ಒಟ್ಟು 31 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಎನ್ ಸಿಪಿ ನಾಯಕ  ಸಂಗ್ರಾಮ್ ಜಗತಾಪ್ ಹಾಗೂ ಸಂದೀಪ್ ಗಂಜಾಲ್, ಬಾಬಾಸಾಹೇಬ್ ಕೋಟ್ಕರ್, ಭಾನುದಾಸ್ ಕೋಟ್ಕರ್ ಬಂಧಿತರೆಂದು ತಿಳಿದುಬಂದಿದೆ.
ಸಂದೀಪ್ ಗಂಜಾಲ್ ಪ್ರಕರಣದ ಪ್ರಮುಖ ಆರೋಪಿ ಎನ್ನುವುದಾಗಿ ಪೋಲೀಸರು ತಿಳಿಸಿದ್ದಾರೆ. ಸಂಗ್ರಾಮ್ ಬಂಧನದಿಂದ ಉದ್ರಿಕ್ತರಾದ ಎನ್ ಸಿಪಿ ಕಾರ್ಯಕರ್ತರು ಪೋಲೀಸ್ ಅಧೀಕ್ಷಕರ ಕಛೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. 
ಸಧ್ಯ ನಗರ ಉದ್ವಿಗ್ನವಾಗಿದ್ದು ಭಾರೀ ಸಂಖ್ಯೆಯ ಪೋಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ."ಇದೀಗ ಪರಿಸ್ಥಿತಿ ಉದ್ವಿಗ್ನವಾಗಿದ್ದು ಹಲವಾರು ವಿಚಾರಗಳನ್ನು ಣಾನು ನಿಮಗೆ ವಿವರಿಸಲು ಸಾಧ್ಯವಾಗುವುದಿಲ್ಲ ಎಂದು ಶಿವಸೇನಾ ನಾಯಕರ ಹತ್ಯೆ ತನಿಖೆ ಕೈಗೊಂಡಿರುವ ಕೊಟ್ಟಾಲಿ ಠಾಣೆಯ ಇನ್ಸ್ ಪೆಕ್ಟರ್ ಎ. ಪರ್ವಾರ್ ಹೇಳಿದ್ದಾರೆ.
ಗುಂಡುಹಾರಿಸುವ ಹಾಗೂ ಹರಿತ ಆಯುಧಗಳಿಂದ ಹಲ್ಲೆ ನಡೆಸುವ ಮೂಲಕ ಇಬ್ಬರು ಶಿವಸೇನಾ ನಾಯಕರನ್ನು ಅಹಮದ್ ನಗರದಲ್ಲಿ ದುಷ್ಕರ್ಮಿಗಳು ನಿನ್ನೆ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ