ಸಾಂದರ್ಭಿಕ ಚಿತ್ರ 
ದೇಶ

ಶಿವಸೇನಾ ನಾಯಕರ ಹತ್ಯೆ: ಎನ್ ಸಿಪಿ ಮುಖಂಡ ಸಂಗ್ರಾಮ್ ಸಹಿತ ನಾಲ್ವರ ಬಂಧನ

ಶಿವಸೇನೆಯ ಸ್ಥಳೀಯ ನಾಯಕರಿಬ್ಬರ ಹತ್ಯೆ ಪ್ರಕರಣ ಸಂಬಂಧಿಸಿ ಪೋಲೀಸರು ಎನ್ ಸಿಪಿ ನಾಯಕ ಸಂಗ್ರಾಮ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಮುಂಬೈ: ಶಿವಸೇನೆಯ ಸ್ಥಳೀಯ ನಾಯಕರಿಬ್ಬರ ಹತ್ಯೆ ಪ್ರಕರಣ ಸಂಬಂಧಿಸಿ ಪೋಲೀಸರು ಎನ್ ಸಿಪಿ ನಾಯಕ ಸಂಗ್ರಾಮ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೆ ಒಟ್ಟು 31 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಎನ್ ಸಿಪಿ ನಾಯಕ  ಸಂಗ್ರಾಮ್ ಜಗತಾಪ್ ಹಾಗೂ ಸಂದೀಪ್ ಗಂಜಾಲ್, ಬಾಬಾಸಾಹೇಬ್ ಕೋಟ್ಕರ್, ಭಾನುದಾಸ್ ಕೋಟ್ಕರ್ ಬಂಧಿತರೆಂದು ತಿಳಿದುಬಂದಿದೆ.
ಸಂದೀಪ್ ಗಂಜಾಲ್ ಪ್ರಕರಣದ ಪ್ರಮುಖ ಆರೋಪಿ ಎನ್ನುವುದಾಗಿ ಪೋಲೀಸರು ತಿಳಿಸಿದ್ದಾರೆ. ಸಂಗ್ರಾಮ್ ಬಂಧನದಿಂದ ಉದ್ರಿಕ್ತರಾದ ಎನ್ ಸಿಪಿ ಕಾರ್ಯಕರ್ತರು ಪೋಲೀಸ್ ಅಧೀಕ್ಷಕರ ಕಛೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. 
ಸಧ್ಯ ನಗರ ಉದ್ವಿಗ್ನವಾಗಿದ್ದು ಭಾರೀ ಸಂಖ್ಯೆಯ ಪೋಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ."ಇದೀಗ ಪರಿಸ್ಥಿತಿ ಉದ್ವಿಗ್ನವಾಗಿದ್ದು ಹಲವಾರು ವಿಚಾರಗಳನ್ನು ಣಾನು ನಿಮಗೆ ವಿವರಿಸಲು ಸಾಧ್ಯವಾಗುವುದಿಲ್ಲ ಎಂದು ಶಿವಸೇನಾ ನಾಯಕರ ಹತ್ಯೆ ತನಿಖೆ ಕೈಗೊಂಡಿರುವ ಕೊಟ್ಟಾಲಿ ಠಾಣೆಯ ಇನ್ಸ್ ಪೆಕ್ಟರ್ ಎ. ಪರ್ವಾರ್ ಹೇಳಿದ್ದಾರೆ.
ಗುಂಡುಹಾರಿಸುವ ಹಾಗೂ ಹರಿತ ಆಯುಧಗಳಿಂದ ಹಲ್ಲೆ ನಡೆಸುವ ಮೂಲಕ ಇಬ್ಬರು ಶಿವಸೇನಾ ನಾಯಕರನ್ನು ಅಹಮದ್ ನಗರದಲ್ಲಿ ದುಷ್ಕರ್ಮಿಗಳು ನಿನ್ನೆ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT