ಹಳ್ಳಿಯಲ್ಲಿ ವಿದ್ಯುತ್ ಕಂಬ ಅಳವಡಿಸುತ್ತಿರುವ ದೃಶ್ಯ 
ದೇಶ

ನಕ್ಸಲರಿಂದ 76 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದ ಹಳ್ಳಿಗೆ 15 ವರ್ಷದ ನಂತರ ವಿದ್ಯುತ್ ಸಂಪರ್ಕ

ನಕ್ಸಲ್ ಪೀಡಿತ ಪ್ರದೇಶವಾದ ಸುಕ್ಮಾ ಜಿಲ್ಲೆಯ ಹಳ್ಳಿಯೊಂದು 15 ವರ್ಷಗಳ ನಂತರ ಮರು ವಿದ್ಯುತ್ ಸಂಪರ್ಕ ಪಡೆದುಕೊಂಡಿದೆ

ಛತ್ತೀಸ್ ಘಡ: ನಕ್ಸಲ್ ಪೀಡಿತ ಪ್ರದೇಶವಾದ   ಸುಕ್ಮಾ ಜಿಲ್ಲೆಯ ಹಳ್ಳಿಯೊಂದು 15 ವರ್ಷಗಳ ನಂತರ ಮರು ವಿದ್ಯುತ್  ಸಂಪರ್ಕ ಪಡೆದುಕೊಂಡಿದೆ.

ನಕ್ಸಲೀಯರ ಹಾವಳಿಯಿಂದಾಗಿ  ಚಿಂತಾಲ್ ನಾರ್ ಗ್ರಾಮದಲ್ಲಿ  ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದವು. ವಿದ್ಯುತ್ ಕಂಬಗಳು ಧರೆಗುರುಳಿ ಬಿದಿದ್ದವು.

ಸುಕ್ಮಾ ಜಿಲ್ಲಾಕೇಂದ್ರದಿಂದ 80 ಕಿಲೋ ಮೀಟರ್ ದೂರದಲ್ಲಿರುವ ಈ ಹಳ್ಳಿಯಲ್ಲಿ ನಕ್ಸಲ್ ಚಟುವಟಿಕೆಯಿಂದಾಗಿ ಮೂಲ ಸೌಲಭ್ಯಗಳಿಂದ ವಂಚಿತವಾಗಿತ್ತು. ಆದರೆ. ಇದೀಗ ನಕ್ಸಲೀಯರ ಹಾವಳಿ ಕಡಿಮೆಯಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ.

ಈ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಒದಗಿಸುತ್ತಿರುವುದಕ್ಕೆ ಗ್ರಾಮಸ್ಥರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಈ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಒದಗಿಸುತ್ತಿರುವುದು ಮರು ಜನ್ಮ ನೀಡಿದಂತಾಗುತ್ತಿದೆ . ಇದರಿಂದಾಗಿ ರಾತ್ರಿ ವೇಳೆಯಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದೆ ಎಂದು ಗ್ರಾಮಸ್ಥರು ಸುದ್ದಿಸಂಸ್ಥೆಯೊಂದಕ್ಕೆ ಹೇಳಿದ್ದಾರೆ.

ಮುಖ್ಯಮಂತ್ರಿ ರಮಣ್ ಸಿಂಗ್ ನೇತೃತ್ವದ ಸರ್ಕಾರ 2018 ಜೂನ್ ಒಳಗೆ ಎಲ್ಲಾ ಹಳ್ಳಿಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಭರವಸೆ ನೀಡಿದ್ದು, ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಲೈನ್ ಅಳವಡಿಸಲಾಗುತ್ತಿದೆ.

ವಿದ್ಯುತ್ ಇಲ್ಲದೆ   ನಕ್ಸಲೀಯರು ಯೋಧರನ್ನು ಬಲಿಪಡಿಕೊಂಡಿದ್ದಾರೆ. ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಪ್ರತಿಯೊಂದು ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಒದಗಿಸಲಾಗುವುದು ಎಂದು ರಮಣ್ ಸಿಂಗ್ ತಿಳಿಸಿದ್ದಾರೆ.

 ಚಿಂತಲ್ ನಾರ್ ಗ್ರಾಮದಲ್ಲಿ 2010 ರಲ್ಲಿ ಮಾವೋವಾದಿಗಳ ಅಮಾನುಷ ಕೃತ್ಯದಿಂದಾಗಿ 76 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT