ಸಿಂಬು 
ದೇಶ

ಕಾವೇರಿ ವಿವಾದ: ತಮಿಳಿಗರ ಹೋರಾಟದ ನಡುವೆ ಕನ್ನಡಿಗರ ಮನಗೆದ್ದ ಸಿಂಬು

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ತಮಿಳುನಾಡಿನಲ್ಲಿ ಹೋರಟಗಳು ನಡೆಯುತ್ತಿದ್ದು ಈ ಮಧ್ಯೆ ತಮಿಳು...

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ತಮಿಳುನಾಡಿನಲ್ಲಿ ಹೋರಟಗಳು ನಡೆಯುತ್ತಿದ್ದು ಈ ಮಧ್ಯೆ ತಮಿಳು ನಟ ಸಿಂಬು ಅವರು ಕರ್ನಾಟಕದ ಪರವಾಗಿ ಮಾತನಾಡಿ ಕನ್ನಡಿಗರ ಮನಗೆದ್ದಿದ್ದಾರೆ. 
ಕಾವೇರಿ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡಿನ ರೈತರು ನಡೆಸಿರುವ ಪ್ರತಿಭಟನೆ ಹೋರಾಟಕ್ಕೆ ತಮಿಳುನಾಡಿನಲ್ಲಿ ಪಕ್ಷಾತೀತ ಬೆಂಬಲ ವ್ಯಕ್ತವಾಗಿದೆ. ಇದರ ಜತೆಗೆ ತಮಿಳು ಚಿತ್ರರಂಗ ಕೂಡ ಕೈಜೋಡಿಸಿದೆ. 
ಈ ಬಗ್ಗೆ ಸಿಂಬು ಮಾಡಿರುವ ಭಾಷಣದ ಬಗ್ಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಸುತ್ತಿವೆ. ಕಾವೇರಿ ವಿವಾದ ಮುಂದಿಟ್ಟುಕೊಂಡು ಇಷ್ಟು ದಿನ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದು ಸಾಕು ಇನ್ನು ಮುಂದಾದರು ಕಾವೇರಿ ವಿವಾದವನ್ನು ತೆಗೆದುಕೊಂಡು ಕನ್ನಡಿಗರ ಜತೆ ಜಗಳ ಮಾಡುವುದನ್ನು ಬಿಡಬೇಕು ಎಂದು ಹೇಳಿದರು. 
ಕರ್ನಾಟಕದವರು ಎಂದಿಗೂ ನೀರು ಬಿಡುವುದಿಲ್ಲ ಎಂದು ಹೇಳಿಲ್ಲ. ವಿನಾಃ ಕಾರಣ ನಾವೇ ಅವರು ನೀರು ಬಿಡುತ್ತಿಲ್ಲ ಎಂದು ಜಗಳ ಮಾಡುತ್ತಿದ್ದೇವೆ. ಈ ಹಿಂದಿನ ಆದೇಶದಂತೆ ಕರ್ನಾಟಕ ತಮಿಳುನಾಡಿಗೆ ನೀರು ಹರಿಸುತ್ತಾ ಬಂದಿದೆ ಎಂದರು.
ವಿಡಿಯೋ ಕೃಪೆ: ಯೂಟ್ಯೂಬ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT