ರಾಜ್'ಘಾಟ್'ನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ರೆಸ್ಟೋರೆಂಟ್ನಲ್ಲಿ ಊಟ ಮಾಡಿದ್ದ ಕಾಂಗ್ರೆಸ್ ನಾಯಕ! 
ದೇಶ

ರಾಜ್'ಘಾಟ್'ನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ರೆಸ್ಟೋರೆಂಟ್ ನಲ್ಲಿ ಊಟ ಮಾಡಿದ್ದ ಕಾಂಗ್ರೆಸ್ ನಾಯಕರು!

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್'ಘಾಟ್ ನಲ್ಲಿ ಕಾಂಗ್ರೆಸ್ ನಾಯಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರೊಬ್ಬರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ರೆಸ್ಟೋರೆಂಟ್ ವೊಂದರಲ್ಲಿ ಊಟ ಮಾಡಿದ್ದು...

ನವದೆಹಲಿ; ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್'ಘಾಟ್ ನಲ್ಲಿ ಕಾಂಗ್ರೆಸ್ ನಾಯಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರೊಬ್ಬರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ರೆಸ್ಟೋರೆಂಟ್ ವೊಂದರಲ್ಲಿ ಊಟ ಮಾಡಿದ್ದು, ಈ ಬಗ್ಗೆ ಬಿಜೆಪಿ ಸೋಮವಾರ ವ್ಯಂಗ್ಯವಾಡಿದೆ. 
ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಅವರ ಪುತ್ರ ಹಾಗೂ ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ, ಅಜಯ್ ಮಕೇನ್, ಹರೂನ್ ಯೂಸುಫ್ ಮತ್ತು ಅರವಿಂದ್ ಸಿಂಗ್ ಲವ್ಲಿ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರು ರೆಸ್ಟೋರೆಂಟ್ ವೊಂದರಲ್ಲಿ ಊಟ ಮಾಡುತ್ತಿರುವ ಫೋಟೋವನ್ನು ಹಂಚಿಕೆ ಮಾಡಿದ್ದು, ಈ ಬಗ್ಗೆ ವ್ಯಂಗ್ಯವಾಡಿದ್ದಾರೆ.
ರಾಜ್'ಘಾಟ್ ಬಳಿ ಇತರರನ್ನು ಉಪವಾಸ ಸತ್ಯಾಗ್ರಹಕ್ಕೆ ಕೂಗಿದ್ದು, ಪಕ್ಷದ ನಾಯಕರು ರೆಸ್ಟೋರೆಂಟ್ ನಲ್ಲಿ ಛೋಲೆ ಭಾತುಲ್ ತಿಂದು ಆನಂದಿಸಿದ್ದಾರೆಂದು ಹೇಳಿಕೊಂಡಿದ್ದಾರೆ. 
ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಅರವಿಂದ ಸಿಂಗ್ ಲವ್ಲಿಯವರು, ಈ ಫೋಟೋವನ್ನು ಬೆಳಿಗ್ಗೆ 8 ಗಂಟೆಗೆ ತೆಗೆಯಲಾಗಿತ್ತು. ರಾಜ್ ಘಾಟ್ ನಲ್ಲಿ ಸಾಂಕೇತಿಕ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿದ್ದು, ಸತ್ಯಾಗ್ರಹವನ್ನು ಬೆಳಿಗ್ಗೆ 10.30ರಿಂದ ಸಂಜೆ 4.30ಕವರೆಗೆ ನಡೆಸಲಾಗುತ್ತದೆ. ಇದು ಅನಿರ್ದಿಷ್ಟಾವಧಿ ಸತ್ಯಾಗ್ರಮವಲ್ಲ ಎಂದು ಹೇಳಿದ್ದಾರೆ. 
ಬಿಜೆಪಿ ನಾಯಕರಿಗೆ ಏನಾಗಿದೆ? ದೇಶವನ್ನು ಹೇಗೆ ನಡೆಸಬೇಕೆಂಬುದರ ಬಗ್ಗೆ ಚಿಂತಿಸುವುದನ್ನು ಬಿಟ್ಟು, ನಾವು ಏನನ್ನು ತಿನ್ನುತ್ತಿದ್ದೇವೆ ಎಂಬುದರ ಬಗ್ಗೆ ಗಮನ ಹರಿಸುತ್ತಿದೆ ಎಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT