ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಅನಿಲ್ ಸ್ವರೂಪ್ 
ದೇಶ

ಕಲ್ಲಿದ್ದಲಿಗೆ ಹೋಲಿಸಿದರೆ ಶಿಕ್ಷಣ ವಲಯವು ಹೆಚ್ಚು ಮಾಫಿಯಾ ಹಿಡಿತದಲ್ಲಿದೆ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯದರ್ಶಿ

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರದ ಮೇಲೂ ಮಾಫಿಯಾದ ಕರಿಛಾಯೆ ಬಿದ್ದಿದೆ ಎಂದು ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಅನಿಲ್ ಸ್ವರೂಪ್ ಅವರು ಬಹಿರಂಗಪಡಿಸಲಿದ್ದಾರೆ...

ನವದೆಹಲಿ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರದ ಮೇಲೂ ಮಾಫಿಯಾದ ಕರಿಛಾಯೆ ಬಿದ್ದಿದೆ ಎಂದು ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಅನಿಲ್ ಸ್ವರೂಪ್ ಅವರು ಬಹಿರಂಗಪಡಿಸಲಿದ್ದಾರೆ. 
ಖಾಸಗಿ ಸುದ್ದಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, ಕಲ್ಲಿದ್ದಲು, ಗಣಿಗಾರಿಕೆ ಭೂಗರ್ಭದಲ್ಲಿ ನಡೆಯುತ್ತದೆ. ಮಾಫಿಯಾ ಎಂಬುದು ಅದಕ್ಕಿಂತಲೂ ದೊಡ್ಡದಾಗಿರುತ್ತದೆ. ಇಂತಹ ಮಾಫಿಯಾ ಹಿಡಿತದಲ್ಲಿ ಇಂದು ಶಿಕ್ಷಣ ಸಿಲುಕಿಕೊಂಡಿದೆ. ಇದರಿಂದ ಶಿಕ್ಷಣ ಕ್ಷೇತ್ರವನ್ನು ಹೊರತರಲು ಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. 
ಸ್ವರೂಪ್ ಅವರ ಹೇಳಿಕೆ ಇತ್ತೀಚೆಗಷ್ಟೇ ಸೋರಿಕೆಯಾಗಿದ್ದ ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲೂ ಮಾಫಿಯಾ ಕೈವಾಡವಿರುವ ಶಂಕೆಗಳನ್ನು ಮೂಡುವಂತೆ ಮಾಡಿದೆ. 
ಇದೇ ವೇಳೆ ಸ್ವರೂಪ್ ಅವರು ಸಿಬಿಎಸ್ಇ ಮುಖ್ಯಸ್ಥೆ ಅನಿತಾ ಕರ್ವಾಲ್ ಅವರನ್ನು ಸಮರ್ಥಿಸಿಕೊಂಡಿರುವ ಅವರು, ಪ್ರಕರಣದ ಹಿಂದಿರುವ ಸತ್ಯಾಂಶಗಳನ್ನು ಅರಿಯದೆಯೇ ಜನರು ಅವರನ್ನು ನಿಂದಿಸುತ್ತಿದ್ದಾರೆಂದಿದ್ದಾರೆ. 
ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಸಿಬಿಎಸ್ಇ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಅವರು, ಈ ವರೆಗೂ ಈ ರೀತಿಯಾಗಿ ಯಾವುದೇ ರೀತಿಯ ದೂರುಗಳಉ ದಾಖಲಾಗಿಲ್ಲ. ಒಂದು ವೇಳೆ ಕೈವಾಡವಿರುವುದು ಸಾಬೀತಾಗಿದ್ದೇ ಆದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 
ಕೈಬರಹದಲ್ಲಿ ಬರೆಯಲಾಗಿದ್ದ 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಮಾರ್ಚ್ 26 ರಂದು ಸೋರಿಕೆಯಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಮರು ಪರೀಕ್ಷೆಯನ್ನು ಏ.25ರಂದು ನಡೆಸಲಾಗುತ್ತದೆ ಎಂದು ಸಿಬಿಎಸ್ಇ ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT