ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಅನಿಲ್ ಸ್ವರೂಪ್ 
ದೇಶ

ಕಲ್ಲಿದ್ದಲಿಗೆ ಹೋಲಿಸಿದರೆ ಶಿಕ್ಷಣ ವಲಯವು ಹೆಚ್ಚು ಮಾಫಿಯಾ ಹಿಡಿತದಲ್ಲಿದೆ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯದರ್ಶಿ

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರದ ಮೇಲೂ ಮಾಫಿಯಾದ ಕರಿಛಾಯೆ ಬಿದ್ದಿದೆ ಎಂದು ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಅನಿಲ್ ಸ್ವರೂಪ್ ಅವರು ಬಹಿರಂಗಪಡಿಸಲಿದ್ದಾರೆ...

ನವದೆಹಲಿ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರದ ಮೇಲೂ ಮಾಫಿಯಾದ ಕರಿಛಾಯೆ ಬಿದ್ದಿದೆ ಎಂದು ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಅನಿಲ್ ಸ್ವರೂಪ್ ಅವರು ಬಹಿರಂಗಪಡಿಸಲಿದ್ದಾರೆ. 
ಖಾಸಗಿ ಸುದ್ದಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, ಕಲ್ಲಿದ್ದಲು, ಗಣಿಗಾರಿಕೆ ಭೂಗರ್ಭದಲ್ಲಿ ನಡೆಯುತ್ತದೆ. ಮಾಫಿಯಾ ಎಂಬುದು ಅದಕ್ಕಿಂತಲೂ ದೊಡ್ಡದಾಗಿರುತ್ತದೆ. ಇಂತಹ ಮಾಫಿಯಾ ಹಿಡಿತದಲ್ಲಿ ಇಂದು ಶಿಕ್ಷಣ ಸಿಲುಕಿಕೊಂಡಿದೆ. ಇದರಿಂದ ಶಿಕ್ಷಣ ಕ್ಷೇತ್ರವನ್ನು ಹೊರತರಲು ಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. 
ಸ್ವರೂಪ್ ಅವರ ಹೇಳಿಕೆ ಇತ್ತೀಚೆಗಷ್ಟೇ ಸೋರಿಕೆಯಾಗಿದ್ದ ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲೂ ಮಾಫಿಯಾ ಕೈವಾಡವಿರುವ ಶಂಕೆಗಳನ್ನು ಮೂಡುವಂತೆ ಮಾಡಿದೆ. 
ಇದೇ ವೇಳೆ ಸ್ವರೂಪ್ ಅವರು ಸಿಬಿಎಸ್ಇ ಮುಖ್ಯಸ್ಥೆ ಅನಿತಾ ಕರ್ವಾಲ್ ಅವರನ್ನು ಸಮರ್ಥಿಸಿಕೊಂಡಿರುವ ಅವರು, ಪ್ರಕರಣದ ಹಿಂದಿರುವ ಸತ್ಯಾಂಶಗಳನ್ನು ಅರಿಯದೆಯೇ ಜನರು ಅವರನ್ನು ನಿಂದಿಸುತ್ತಿದ್ದಾರೆಂದಿದ್ದಾರೆ. 
ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಸಿಬಿಎಸ್ಇ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಅವರು, ಈ ವರೆಗೂ ಈ ರೀತಿಯಾಗಿ ಯಾವುದೇ ರೀತಿಯ ದೂರುಗಳಉ ದಾಖಲಾಗಿಲ್ಲ. ಒಂದು ವೇಳೆ ಕೈವಾಡವಿರುವುದು ಸಾಬೀತಾಗಿದ್ದೇ ಆದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 
ಕೈಬರಹದಲ್ಲಿ ಬರೆಯಲಾಗಿದ್ದ 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಮಾರ್ಚ್ 26 ರಂದು ಸೋರಿಕೆಯಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಮರು ಪರೀಕ್ಷೆಯನ್ನು ಏ.25ರಂದು ನಡೆಸಲಾಗುತ್ತದೆ ಎಂದು ಸಿಬಿಎಸ್ಇ ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT