ಸಂಗ್ರಹ ಚಿತ್ರ 
ದೇಶ

ಹಿಮಾಚಲ ಪ್ರದೇಶ: ಕಂದಕಕ್ಕೆ ಉರುಳಿದ ಶಾಲಾ ಬಸ್, 26 ವಿದ್ಯಾರ್ಥಿಗಳ ದುರ್ಮರಣ

60 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲೆಯ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 20 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ...

ಧರ್ಮಶಾಲಾ: 60 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲೆಯ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 26 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲಪ್ರದೇಶದಲ್ಲಿ ನಡೆದಿದೆ. 
ನಿರ್ಪುರದ ಮಾಲ್ಕ್ವಾಲ್ ಬಳಿ 4.30ರ ಸುಮಾರಿಗೆ ಬಸ್ 100 ಅಡಿ ಆಳದ ಕಂದಕಕ್ಕೆ ಉರುಳಿದೆ. 40 ಸೀಟುಗಳುಳ್ಳ ಬಸ್ ನಲ್ಲಿ 60 ವಿದ್ಯಾರ್ಧಿಗಳು ಹತ್ತಿಸಿಕೊಂಡು ಹೋಗಲಾಗಿತ್ತು. 
ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ತುರ್ತು ಚಿಕಿತ್ಸೆ ನೀಡಲು ಘಟನಾ ಸ್ಥಳದಲ್ಲಿ ಆ್ಯಂಬುಲೆನ್ಸ್, ವೈದ್ಯರು ಬೀಡುಬಿಟ್ಟಿದ್ದಾರೆ. 
ವಾಜಿರ್ ರಾಮ್ ಸಿಂಗ್ ಸ್ಕೂಲ್ ಗೆ ಸೇರಿದ ಬಸ್ ಇದಾಗಿದ್ದು ರಸ್ತೆ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಕಂದಕಕ್ಕೆ ಉರುಳಿದೆ. ಇನ್ನು ಈ ಅಪಘಾತದಲ್ಲಿ ಸಾವು ನೋವಿನ ಸಂಖ್ಯೆ ಏರಿಕೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಕಲಬುರಗಿ: ನಡುರಸ್ತೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ; ಶವದ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಪತಿಯ ಬಂಧನ

SCROLL FOR NEXT