ಸಾಂದರ್ಭಿಕ ಚಿತ್ರ 
ದೇಶ

ಆಂಧ್ರಪ್ರದೇಶ: ಸಂಬಂಧಿಕರ ಎದುರು ತಾಯಿಗೆ ನಿಂದನೆ, ಕೆಂಡಾಮಂಡಲಗೊಂಡ ಪುತ್ರನಿಂದ ತಂದೆ ಮೇಲೆ ಗುಂಡಿನ ದಾಳಿ

ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಸಂಬಂಧಿಕರೆದುರು ಹೆತ್ತಿ ತಾಯಿಯನ್ನು ನಿಂದಿಸಿಕ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಪುತ್ರನೊಬ್ಬ ತಂದೆ ಹಾಗೂ ಸಂಬಂಧಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಆಂಧ್ರಪ್ರದೇಶದ...

ವಿಶಾಖಪಟ್ಟಣಂ: ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಸಂಬಂಧಿಕರೆದುರು ಹೆತ್ತಿ ತಾಯಿಯನ್ನು ನಿಂದಿಸಿಕ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಪುತ್ರನೊಬ್ಬ ತಂದೆ ಹಾಗೂ ಸಂಬಂಧಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಆಂಧ್ರಪ್ರದೇಶದ ಕಿಂಚುರು ಎಂಬಂಲ್ಲಿ ಸೋಮವಾರ ನಡೆದಿದೆ. 
ಪೋತುರಾಜು ಎಂಬುವವರು ಮನೆಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಕಾರ್ಯಕ್ರಮಕ್ಕೆ ಎಲ್ಲಾ ಸಂಬಂಧಿಕರಿಗೂ ಆಹ್ವಾನ ನೀಡಿದ್ದರು. ಇದರಂತೆ ನಿನ್ನೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಪೋತುರಾಜು ಅವರ ಪತ್ನಿ ತಂಪು ಪಾನೀಯವನ್ನು ನೀಡುತ್ತಿದ್ದರು. ತಂಪು ಪಾನೀಯ ಸಾಕಾಗದೆ ಬಂದಿದ್ದರಿಂದಾಗಿ ಪತ್ನಿ ಮೇಲೆ ತೀವ್ರವಾಗಿ ಕೋಪಗೊಂಡ ಪೊತುರಾಜು ಅವರು ಎಲ್ಲರ ಎದುರಿಗೇ ನಿಂದಿಸಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಪೋತುರಾಜು ಅವರ ಪುತ್ರ ಬಾಲಾಜಿ ತಾಯಿಯ ಬೆಂಬಲಕ್ಕೆ ನಿಂತು, ತಂದೆಯೊಂದಿಗೆ ಹಾಗೂ ಸಂಬಂಧಿ ಸಂನ್ಯಾಸಿ ಬಾಬು ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾನೆ. ಬಳಿಕ ತೀವ್ರವಾಗಿ ಕೊಂಡಾಮಂಡಲಗೊಂಡು ದೇಸೀ ನಿರ್ಮಿತ ಬಂದೂಕಿನಿಂದ ಸಂಬಂಧಿಕರು ಹಾಗೂ ತಂದೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. 
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ರೀತಿಯ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 
ಘಟನೆ ಬಳಿಕ ಬಾಲಾಜಿ ತಲೆಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT