ಸಾಂದರ್ಭಿಕ ಚಿತ್ರ 
ದೇಶ

ಆಂಧ್ರಪ್ರದೇಶ: ಸಂಬಂಧಿಕರ ಎದುರು ತಾಯಿಗೆ ನಿಂದನೆ, ಕೆಂಡಾಮಂಡಲಗೊಂಡ ಪುತ್ರನಿಂದ ತಂದೆ ಮೇಲೆ ಗುಂಡಿನ ದಾಳಿ

ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಸಂಬಂಧಿಕರೆದುರು ಹೆತ್ತಿ ತಾಯಿಯನ್ನು ನಿಂದಿಸಿಕ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಪುತ್ರನೊಬ್ಬ ತಂದೆ ಹಾಗೂ ಸಂಬಂಧಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಆಂಧ್ರಪ್ರದೇಶದ...

ವಿಶಾಖಪಟ್ಟಣಂ: ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಸಂಬಂಧಿಕರೆದುರು ಹೆತ್ತಿ ತಾಯಿಯನ್ನು ನಿಂದಿಸಿಕ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಪುತ್ರನೊಬ್ಬ ತಂದೆ ಹಾಗೂ ಸಂಬಂಧಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಆಂಧ್ರಪ್ರದೇಶದ ಕಿಂಚುರು ಎಂಬಂಲ್ಲಿ ಸೋಮವಾರ ನಡೆದಿದೆ. 
ಪೋತುರಾಜು ಎಂಬುವವರು ಮನೆಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಕಾರ್ಯಕ್ರಮಕ್ಕೆ ಎಲ್ಲಾ ಸಂಬಂಧಿಕರಿಗೂ ಆಹ್ವಾನ ನೀಡಿದ್ದರು. ಇದರಂತೆ ನಿನ್ನೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಪೋತುರಾಜು ಅವರ ಪತ್ನಿ ತಂಪು ಪಾನೀಯವನ್ನು ನೀಡುತ್ತಿದ್ದರು. ತಂಪು ಪಾನೀಯ ಸಾಕಾಗದೆ ಬಂದಿದ್ದರಿಂದಾಗಿ ಪತ್ನಿ ಮೇಲೆ ತೀವ್ರವಾಗಿ ಕೋಪಗೊಂಡ ಪೊತುರಾಜು ಅವರು ಎಲ್ಲರ ಎದುರಿಗೇ ನಿಂದಿಸಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಪೋತುರಾಜು ಅವರ ಪುತ್ರ ಬಾಲಾಜಿ ತಾಯಿಯ ಬೆಂಬಲಕ್ಕೆ ನಿಂತು, ತಂದೆಯೊಂದಿಗೆ ಹಾಗೂ ಸಂಬಂಧಿ ಸಂನ್ಯಾಸಿ ಬಾಬು ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾನೆ. ಬಳಿಕ ತೀವ್ರವಾಗಿ ಕೊಂಡಾಮಂಡಲಗೊಂಡು ದೇಸೀ ನಿರ್ಮಿತ ಬಂದೂಕಿನಿಂದ ಸಂಬಂಧಿಕರು ಹಾಗೂ ತಂದೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. 
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ರೀತಿಯ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 
ಘಟನೆ ಬಳಿಕ ಬಾಲಾಜಿ ತಲೆಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT