ರಾಬ್ರಿ ದೇವಿ 
ದೇಶ

ಐಆರ್ ಸಿಟಿಸಿ ಹೋಟೆಲ್ ಹಗರಣ: ಸಿಬಿಐಯಿಂದ ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ ವಿಚಾರಣೆ

ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್‍(ಐಆರ್ ಸಿಟಿಸಿ) ಹೊಟೇಲ್ ಹಗರಣಕ್ಕೆ....

ನವದೆಹಲಿ: ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್‍(ಐಆರ್ ಸಿಟಿಸಿ) ಹೊಟೇಲ್ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಸಿಬಿಐ ಮಂಗಳವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ.
ಸಿಬಿಐ ಅಧಿಕಾರಿಗಳ ತಂಡ ರಾಬ್ರಿ ದೇವಿ ಅವರನ್ನು ಪಾಟ್ನಾದಲ್ಲಿಯೇ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2006ರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಹೊಟೇಲ್ ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಸಿಬಿಐ ಲಾಲು ಪತ್ನಿ ರಾಬ್ರಿದೇವಿ ಹಾಗೂ ಪುತ್ರ ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ಈ ಸಂಬಂಧ ಕಳೆದ ಜೂನ್ ನಲ್ಲಿ ಸಿಬಿಐ, ದೆಹಲಿ, ಪಾಟ್ನಾದಲ್ಲಿರುವ ಲಾಲು ನಿವಾಸ ಹಾಗೂ ಗುರುಗಾಂವ್ ಸೇರಿದಂತೆ ಒಟ್ಟು 12 ಕಡೆ ದಾಳಿ ನಡೆಸಿತ್ತು. ಅಲ್ಲದೆ ಸಿಬಿಐ ಕೋರ್ಟ್ ಮುಂದೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿತ್ತು. 
ಪುರಿ ಮತ್ತು ರಾಂಚಿಯಲ್ಲಿ ರೈಲ್ವೆಗಾಗಿ ಎರಡು ಹೋಟೆಲ್ ಗಳನ್ನು ನಡೆಸಲು ಹರ್ಷ್ ಕೊಚ್ಚರ್ ಎಂಬುವರಿಗೆ 15 ವರ್ಷಗಳ ಗುತ್ತಿಗೆ ನೀಡಿದ್ದು ಅದಕ್ಕೆ ಪ್ರತಿಯಾಗಿ ಲಾಲು ಪ್ರಸಾದ್ ಯಾದವ್ ಕುಟುಂಬ ಪಾಟ್ನಾದಲ್ಲಿ ಎರಡು ಎಕರೆ ಜಮೀನನ್ನು ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT