ಉನ್ನಾವೋ ಅತ್ಯಾಚಾರ ಪ್ರಕರಣ: ಪೊಲೀಸ್ ಕಸ್ಟಡಿಗೂ ಮುನ್ನ ಸಂತ್ರಸ್ತೆ ತಂದೆಗೆ ಯಾವುದೇ ಆಂತರಿಕ ಗಾಯಗಳಿರಲಿಲ್ಲ: ವರದಿ 
ದೇಶ

ಉನ್ನಾವೋ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ತಂದೆಗೆ ಪೊಲೀಸ್ ಕಸ್ಟಡಿಗೂ ಮುನ್ನ ಯಾವುದೇ ಗಾಯಗಳಾಗಿರಲಿಲ್ಲ: ವರದಿ

ಉನ್ನಾವೋ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ತಂದೆಯ ದೇಹದಲ್ಲಿ ಪೊಲೀಸ್ ಕಸ್ಟಡಿಗೂ ಮುನ್ನ ಯಾವುದೇ ರೀತಿಯ ಆಂತರಿಕ ಗಾಯಗಳಿರಲಿಲ್ಲ ಎಂದು ವರದಿಗಳು ತಿಳಿಸಿವೆ...

ಲಖನೌ: ಉನ್ನಾವೋ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ತಂದೆಯ ದೇಹದಲ್ಲಿ ಪೊಲೀಸ್ ಕಸ್ಟಡಿಗೂ ಮುನ್ನ ಯಾವುದೇ ರೀತಿಯ ಆಂತರಿಕ ಗಾಯಗಳಿರಲಿಲ್ಲ ಎಂದು ವರದಿಗಳು ತಿಳಿಸಿವೆ. 
ಪೊಲೀಸ್ ಕಸ್ಟಡಿಗೂ ಮುನ್ನ ಸಂತ್ರಸ್ತ ಯುವತಿಯ ತಂದೆಗೆ ಅಲ್ಟ್ರಾಸೌಂಡ್ ಸ್ಕಾನಿಂಗ್'ಗೆ ಒಳಪಡಿಸಲಾಗಿದೆ. ಈ ವೇಳೆ ಅವರಲ್ಲಿ ಯಾವುದೇ ರೀತಿಯಲ ಆಂತರಿಕ ಗಾಯಗಳಿರಲಿಲ್ಲ ಎಂಬುದು ವರದಿಯಲ್ಲಿ ತಿಳಿಸಿದೆ. 
ಆದರೆ, ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರು, ಇದಕ್ಕೆ ತದ್ವಿರುದ್ಧವಾಗಿ ವರದಿಗಳನ್ನು ನೀಡಿದ್ದಾರೆ. ಆಘಾತ, ರಕ್ತದ ಸೋಕು ಹಾಗೂ ಬ್ಯಾಕ್ಟಿರಿಯಾ ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ತಿಳಿಸಲಾಗಿದೆ. ಎರಡೂ ವರದಿಗಳಿಂದಾಗಿ ಇದೀಗ ಪ್ರಕರಣ ಸಂಬಂಧ ಸಾಕಷ್ಟು ಅನುಮಾನಗಳು ಮೂಡತೊಡಗಿವೆ.
 ಒಂದೆಡೆ ಅಧಿಕಾರಿಗಳು ಆರೋಗ್ಯ ಸಮಸ್ಯೆಗಳಿಂದಾಗಿ ಸಂತ್ರಸ್ತೆ ತಂದೆ ಮೃತಪಟ್ಟಿದ್ದಾರೆಂದು ಹೇಳುತ್ತಿದ್ದರೆ, ಮತ್ತೊಂದೆಡೆ ಕುಟುಂಬಸ್ಥರು ಪೊಲೀಸರೇ ಹತ್ಯೆ ಮಾಡಿದ್ದಾರೆಂದು ಆರೋಪ ಮಾಡುತ್ತಿದ್ದಾರೆ. 
ಪ್ರಸ್ತುತ ಪ್ರಕರಣವನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಸತ್ಯಾಂಶಗಳು ಬಹಿರಂಗಗೊಳ್ಳಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

ಚಳಿಗಾಲದ ಅಧಿವೇಶನ ಸಂಪನ್ನ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಗಣನೀಯ ಅನುದಾನ; ವಿಪಕ್ಷಗಳ ಗದ್ದಲದ ನಡುವೆಯೆ ಮಸೂದೆಗಳ ಅಂಗೀಕಾರ

SCROLL FOR NEXT