ಸುಪ್ರೀಂ ಕೋರ್ಟ್ 
ದೇಶ

ಭಾರತದ ಮುಖ್ಯ ನ್ಯಾಯಮೂರ್ತಿಗಳೇ ಮೊದಲು, ಕೇಸ್ ಗಳ ಹಂಚಿಕೆಯನ್ನು ಅವರೇ ನಿರ್ಧರಿಸುತ್ತಾರೆ: ಸುಪ್ರೀಂ

ಮುಖ್ಯ ನ್ಯಾಯಾಧೀಶರು ಹುದ್ದೆಯಲ್ಲಿ ಮೊದಲಿಗರಾಗಿದ್ದು, ಪ್ರಕರಣಗಳ ಹಂಚಿಕೆ ಮತ್ತು ಅವುಗಳ ವಿಚಾರಣೆಗೆ ನ್ಯಾಯಪೀಠಗಳ ಸ್ಥಾಪನೆ...

ನವದೆಹಲಿ: ಮುಖ್ಯ ನ್ಯಾಯಾಧೀಶರು ಹುದ್ದೆಯಲ್ಲಿ ಮೊದಲಿಗರಾಗಿದ್ದು, ಪ್ರಕರಣಗಳ ಹಂಚಿಕೆ ಮತ್ತು ಅವುಗಳ ವಿಚಾರಣೆಗೆ ನ್ಯಾಯಪೀಠಗಳ ಸ್ಥಾಪನೆ ಕುರಿತು ನಿರ್ಧರಿಸುವ ಸಾಂವಿಧಾನಿಕ ಅಧಿಕಾರವನ್ನು ಅವರು ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ತರ್ಕಬದ್ಧ ಮತ್ತು ಪಾರದರ್ಶಕವಾಗಿ ಕೇಸುಗಳನ್ನು ಹಂಚಿಕೆ ಮಾಡಿ ಅವುಗಳ ವಿಚಾರಣೆಗೆ ನ್ಯಾಯಪೀಠಗಳನ್ನು ರಚಿಸಲು ಮಾರ್ಗಸೂಚಿ ಚೌಕಟ್ಟುಗಳನ್ನು ರಚಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

ನ್ಯಾಯಪೀಠ  ಸ್ಥಾಪನೆ ಕುರಿತು ಆದೇಶ ಪ್ರಕಟಿಸಿದ ನ್ಯಾಯಮೂರ್ತಿ ಚಂದ್ರಚೂಡ್, ಸಾಂವಿಧಾನಿಕ ಯೋಜನೆಗಳಿಗೆ ಉಲ್ಲೇಖಿಸಿ ಹುದ್ದೆಯ ವಿಚಾರ ಬಂದಾಗ ಭಾರತದ ಮುಖ್ಯ ನ್ಯಾಯಮೂರ್ತಿಗಳು ಮೊದಲಿಗರಾಗಿದ್ದು, ಕೇಸುಗಳ ಹಂಚಿಕೆ ಮತ್ತು ನ್ಯಾಯಪೀಠಗಳ ಸ್ಥಾಪನೆ ಮಾಡುವ ಅಧಿಕಾರ ಹೊಂದಿರುತ್ತಾರೆ ಎಂದು ಹೇಳಿದ್ದಾರೆ.

ದೇಶದ ಸಂವಿಧಾನದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಹುದ್ದೆ ಅತ್ಯುನ್ನತವಾಗಿರುವುದರಿಂದ ಅವರು ನೀಡುವ ಜವಾಬ್ದಾರಿಗಳ ಬಗ್ಗೆ ಯಾವುದೇ ಅಪನಂಬಿಕೆಗಳಿರುವುದಿಲ್ಲ.ಸಂವಿಧಾನದಡಿಯಲ್ಲಿ ಅಗತ್ಯಪಟ್ಟ ಕೆಲಸಗಳನ್ನು ಸುಪ್ರೀಂ ಕೋರ್ಟ್ ವಹಿಸುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾಧೀಶರಾದ ಜೆ.ಚೆಲಮೇಶ್ವರ್,ರಂಜನ್ ಗೊಗೊಯ್, ಮದನ್ ಬಿ ಲೊಕುರ್ ಮತ್ತು ಕುರಿಯನ್ ಜೋಸೆಫ್ ಕಳೆದ ಜನವರಿ 12ರಂದು ಸುದ್ದಿಗೋಷ್ಠಿ ನಡೆಸಿ, ಮುಖ್ಯ ನ್ಯಾಯಮೂರ್ತಿಗಳು ಪ್ರಕರಣಗಳ ವಿಚಾರಣೆಯನ್ನು ಸರಿಯಾಗಿ ಕೆಳ ನ್ಯಾಯಾಲಯಗಳಿಗೆ ಹಂಚಿಕೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಪ್ರಕರಣಗಳ ವಿಚಾರಣೆ ಹಂಚಿಕೆ ಮತ್ತು ನ್ಯಾಯಪೀಠಗಳ ಸ್ಥಾಪನೆಯಲ್ಲಿ ಎಲ್ಲಾ ಹೈಕೋರ್ಟ್ ಗಳು ಮತ್ತು ಸುಪ್ರೀಂ ಕೋರ್ಟ್ ಗೆ ಮಾರ್ಗಸೂಚಿ ನೀಡಬೇಕೆಂದು ಕೋರಿ ಅಶೋಕ್ ಪಾಂಡೆ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT