ಸಾಂದರ್ಭಿಕ ಚಿತ್ರ 
ದೇಶ

ಗಣಿತವನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಸಲಹೆಗಾಗಿ ಸಮಿತಿ ರಚಿಸಿದ ಸರ್ಕಾರ

ಗಣಿತವನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು, ಶಾಲೆಗಳಲ್ಲಿ ಅದನ್ನು ಸುಲಭವಾಗಿ ಕಲಿಸಲು ಸಹಕಾರಿಯಾಗುವಂತಾ ಸಲಹೆ ನೀಡಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ..........

ನವದೆಹಲಿ: ಗಣಿತವನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು, ಶಾಲೆಗಳಲ್ಲಿ ಅದನ್ನು ಸುಲಭವಾಗಿ ಕಲಿಸಲು ಸಹಕಾರಿಯಾಗುವಂತಾ  ಸಲಹೆ ನೀಡಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಗುಜರಾತ್ ಶಿಕ್ಷಣ ಸಚಿವ ಭೂಪೇಂದ್ರ ಸಿಂಗ್ ಚುದಸಾಮಾ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.
2017ರ   ರಾಷ್ಟ್ರೀಯ ಮೌಲ್ಯಮಾಪನ ಸಮೀಕ್ಷೆಯಲ್ಲಿ ತಿಳಿದುಬಂದಂತೆ ಹೆಚ್ಚಿನ ವಿದ್ಯಾರ್ಥಿಗಳು "ಗಣಿತವೆಂದರೆ ಭಯ"  ಎಂದು ಹೇಳುತ್ತಾರೆ. ಈ ಕಾರಣಕ್ಕಾಗಿ ಇಂದು ಎನ್ ಸಿಇಆರ್ ಟಿ ಅಧಿಕಾರಿಗಳು ಮತ್ತು ಕೆಲ ರಾಜ್ಯಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದು ಗಣಿತ ವಿಷಯವನ್ನು ಸುಲಭವಾಗಿ ಕಲಿಸುವಂತಾಗಲು ಸಮಿತಿ ರಚನೆ ಮಾಡುತ್ತಿದ್ದೇವೆ" ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ
"ಗಣಿತದ ಬಗ್ಗೆ ಭಯ, ಸಂಕೀರ್ಣ ಮನೋಬಾವವನ್ನು ಹೋಗಲಾಡಿಸುವ ಉದ್ದೇಶದಿಂದ ಹಾಗೆಯೇ ಗಣಿತದ ಕಲಿಕೆಯನ್ನು ಹೆಚ್ಚು ಸರಳವಾಗುವಂತೆ ಸೂಚಿಸಲು ಸಮಿತಿಗೆ ಸೂಚಿಸಲಾಗಿದೆ.ಇದು ಶಿಕ್ಷಣತಜ್ಞರು ಹಾಗೂ ಅಧಿಕಾರಿಗಳನ್ನು ಒಳಗೊಂಡಿದೆ. ಹಾಗೆಯೇ ಸಮಿತಿಯು ಮುಂದಿನ ಮೂರು ತಿಂಗಳಿನಲ್ಲಿ ತನ್ನ ವರದಿ ಸಲ್ಲಿಸಲಿದೆ" ಜಾವಡೇಕರ್ ತಿಳಿಸಿದ್ದಾರೆ.
ಇದೇ ವೇಳೆ ತೆಲಂಗಾಣ ಉಪಮುಖ್ಯಮಂತ್ರಿ (ಶಿಕ್ಷಣ) ಕದಂ ಶ್ರೀಹರಿ ಅವರ ಅಧ್ಯಕ್ಷತೆಯಲ್ಲಿ  ಇನ್ನೊಂದು ಸಮಿತಿಯನ್ನು ರಚನೆ ಮಾಡಲಾಗಿದ್ದು ಇದು ದೇಶದಲ್ಲಿ ಶಿಕ್ಷಕ ತರಬೇತಿ ಗುಣಮಟ್ಟವನ್ನು ಸುಧಾರಿಸುವ ಮಾರ್ಗವನ್ನು ಸೂಚಿಸಲಿದೆ. ಈ ಸಮಿತಿ ಸಹ ಮುಂಬರೌವ ಮೂರು ತಿಂಗಳಲ್ಲಿ ತಮ್ಮ ವರದಿಯನ್ನು ಸರ್ಕಾರಕ್ಕೆ ನೀಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT