ನೈಜ್ಯ ದೃಶ್ಯ 
ದೇಶ

ತಮಿಳುನಾಡು: ಕಾವೇರಿಗಾಗಿ ರೈಲಿನ ಮೇಲೆ ಪ್ರತಿಭಟನೆ ಮಾಡುತ್ತಿದ್ದಾಗ ಕರೆಂಟ್ ಶಾಕ್, ಓರ್ವನ ಸ್ಥಿತಿ ಚಿಂತಾಜನಕ

ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಒತ್ತಾಯಿಸಿ ತಮಿಳುನಾಡಿನಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಈ ಸಂಬಂಧ ನಡೆಸಲಾಗುತ್ತಿದ್ದ ಪ್ರತಿಭಟನೆ...

ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಒತ್ತಾಯಿಸಿ ತಮಿಳುನಾಡಿನಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಈ ಸಂಬಂಧ ನಡೆಸಲಾಗುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾಕಾರನೊಬ್ಬನಿಗೆ ಕರೆಂಟ್ ಶಾಕ್ ಹೊಡೆದಿದೆ. 
ತಿನ್ದಿವನಂ ರೈಲು ನಿಲ್ದಾಣದಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ(ಪಿಎಂಕೆ) ಕಾರ್ಯಕರ್ತರು ರೈಲು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರಂಜಿತ್ ಎಂಬಾತ ರೈಲಿನ ಮೇಲೆ ಹೋಗಿ ಕೇಂದ್ರ ಸರ್ಕಾರದ ವಿರುದ್ಧ ಕೂಗಾಡುತ್ತಿದ್ದ ವೇಳೆ ಆತನಿಗೆ ರೈಲಿಗಾಗಿ ಅಳವಡಿಸಿದ್ದ ವಿದ್ಯುತ್ ಕಂಬಿ ತಾಗಿ ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್ ಶಾಕ್ ನಿಂದ ರಂಜಿತ್ ಶೇಖಡ 70ರಷ್ಟು ಭಾಗ ಸುಟ್ಟು ಹೋಗಿದ್ದು ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಯಿತು. 
ಪಿಎಂಕೆ ಪಕ್ಷ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದು ಪಕ್ಷದ ಕಾರ್ಯಕರ್ತರು ಹಲವೆಡೆ ರೈಲುಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT