ಸಾಂದರ್ಭಿಕ ಚಿತ್ರ 
ದೇಶ

ಕೃಷ್ಣಾ ನದಿ ನೀರನ್ನು ನಾಲ್ಕು ರಾಜ್ಯಗಳಿಗೆ ಯೋಜನೆವಾರು ಹಂಚಿಕೆ ಮಾಡಬೇಕು: ಆಂಧ್ರ ಪ್ರದೇಶ

ಆಂಧ್ರ ಪ್ರದೇಶ ಮತ್ತು ತೆಲಂಗಾಣ ನಡುವೆ ಕೃಷ್ಣಾ ನದಿ ನೀರು ಹಂಚಿಕೆ ಹಲವು ಸಮಸ್ಯೆಗಳನ್ನು ...

ಹೈದರಾಬಾದ್: ಆಂಧ್ರ ಪ್ರದೇಶ ಮತ್ತು ತೆಲಂಗಾಣ ನಡುವೆ ಕೃಷ್ಣಾ ನದಿ ನೀರು ಹಂಚಿಕೆ ಹಲವು ಸಮಸ್ಯೆಗಳನ್ನು ಹುಟ್ಟುಹಾಕಿದೆ. ಕೃಷ್ಣಾ ನದಿ ಜಲವಿಜ್ಞಾನದ ಘಟಕ ಕಾರ್ಯನಿರ್ವಹಣೆ ಶಿಷ್ಠಾಚಾರವನ್ನು ನಿರ್ಧರಿಸುತ್ತದೆ ಎಂದು ಕೃಷ್ಣಾ ಜಲ ವಿವಾದ ನ್ಯಾಯಧೀಕರಣದ ಮುಂದೆ ಆಂಧ್ರ ಪ್ರದೇಶ ಸರ್ಕಾರ ವಾದಿಸಿದೆ.

ನಿನ್ನೆ ಆಂಧ್ರ ಪ್ರದೇಶ ಸರ್ಕಾರ ಪರ ವಕೀಲ ಬ್ರಿಜೇಶ್ ಕುಮಾರ್ ನ್ಯಾಯಾಧೀಕರಣ ಮುಂದೆ ಅಫಿದವಿತ್ತು ಸಲ್ಲಿಸಿದ್ದು ಕೃಷ್ಣನದಿ ನೀರಿನ ಯೋಜನಾವಾರು ಹಂಚಿಕೆ ಜಾರಿಗೆ ಒತ್ತಾಯಿಸಿದ್ದಾರೆ. ಆಂಧ್ರ ಪ್ರದೇಶ ಪುನರ್ರಚನೆ ಕಾಯ್ದೆ 2014ರ  ಸೆಕ್ಷನ್ 89ರಡಿಯಲ್ಲಿ ನೀರಿನ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕೃಷ್ಣಾ ನದಿ ನೀರನ್ನು ನಾಲ್ಕು ರಾಜ್ಯಗಳಿಗೆ ಯೋಜನಾವಾರು ಹಂಚಿಕೆ ಮಾಡಬೇಕೆಂದು ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಒತ್ತಾಯಿಸಿದರೂ ಕೂಡ ನ್ಯಾಯಾಧೀಕರಣ ಈ ಹಿಂದೆ ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆ ಸಾಧ್ಯತೆಗಳು ಮಹಾರಾಷ್ಟ್ರ ಮತ್ತು ಕರ್ನಾಟಕಕ್ಕೆ ಅನ್ವಯವಾಗುವುದಿಲ್ಲ ಎಂದು ಹೇಳಿತ್ತು. ಇದೀಗ ಕೃಷ್ಣಾ ನದಿ ನೀರನ್ನು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಯೋಜನಾವಾರು ಹಂಚಿಕೆ ಮಾಡಬೇಕೆಂಬ ಚರ್ಚೆಗಳು ನಡೆಯುತ್ತಿವೆ.

ಕೃಷ್ಣಾ ನದಿ ನೀರು ಹರಿದುಹೋಗುವ  ಎಲ್ಲಾ ನಾಲ್ಕು ರಾಜ್ಯಗಳಿಗೆ ನೀರಿನ ಯೋಜನಾವಾರು ಹಂಚಿಕೆ ಮಾಡಬೇಕೆಂದು ಆಂಧ್ರಪ್ರದೇಶ ಪುನರುಚ್ಛರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

INDIA ಸಭೆಯಲ್ಲಿ ಭಾಗವಹಿಸಿರುವ ಮಮತಾಗೆ ಬಿಗ್ ಶಾಕ್; NDAಗೆ ಬೆಂಬಲ ನೀಡಿದ 20 TMC ಸಂಸದರು!

ನಟಿ ಸುಕನ್ಯಾ ಅಕ್ರಮ ಸಂಬಂಧ ವೀರಪ್ಪನ್ ಹೇಳಿಕೆ: 10 ಲಕ್ಷ ಪರಿಹಾರ ನೀಡುವಂತೆ Sun Tvಗೆ ಹೈಕೋರ್ಟ್ ನಿರ್ದೇಶನ!

ಆಫ್ಘಾನ್ ಮಣಿಸಿದ ಭಾರತಕ್ಕೆ ಆಘಾತ, WTC ಅಂಕ ಪಟ್ಟಿಯಲ್ಲಿ ಬದಲಾವಣೆಯೇ ಇಲ್ಲ..! ಕಾರಣ ಏನು ಗೊತ್ತಾ?

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM! Video

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

SCROLL FOR NEXT