ಉನ್ನಾವೊ ಅತ್ಯಾಚಾರ ಖಂಡಿಸಿ ರಾಹುಲ್ ಕರೆನಿಡಿದ್ದ ಮೇಣದಬತ್ತಿ ಹಿಡಿಉ ಪ್ರತಿಭಟನೆಲ್ಲಿ ಭಾಗವಹಿಸಿರುವ ಕಾಂಗ್ರೆಸ್ ಕಾರ್ಯಕರ್ತರು 
ದೇಶ

ಉನ್ನಾವೊ ಅತ್ಯಾಚಾರ: ರಾಹುಲ್ ರಿಂದ ಮಧ್ಯರಾತ್ರಿ ಮೇಣದಬತ್ತಿ ಹಿಡಿದು ಪ್ರತಿಭಟನೆ

ದೇಶವು ತನ್ನ ಮಹಿಳೆಯ ಮೇಲಾಗುವ ಅನಾಚಾರವನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಕಥುವಾ ಹಾಗು ಉನ್ನಾವೊ ಅತ್ಯಾಚಾರ ಪ್ರಕರಣ ವಿರೋಧಿಸಿ ತಾವು ಮಧ್ಯರಾತ್ರಿ ವೇಳೆ ............

ನವದೆಹಲಿ: ದೇಶವು ತನ್ನ ಮಹಿಳೆಯ ಮೇಲಾಗುವ ಅನಾಚಾರವನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಕಥುವಾ ಹಾಗು ಉನ್ನಾವೊ  ಅತ್ಯಾಚಾರ ಪ್ರಕರಣ ವಿರೋಧಿಸಿ ತಾವು ಮಧ್ಯರಾತ್ರಿ ವೇಳೆ  ಇಂಡಿಯಾ ಗೇಟ್ ಬಳಿ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಪ್ರತಿಭಟನೆಯಲ್ಲಿ ದೆಹಲಿಯ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಜತೆಯಾಗಲಿದ್ದಾರೆ.
"ಲಕ್ಷಾಂತರ ಭಾರತೀಯರಂತೆಯೇ ನನ್ನ ಹೃದಯ ಸಹ ಈ ರಾತ್ರಿ ಮರುಗುತ್ತದೆ. ಭಾರತವು ತನ್ನ ಮಹಿಳೆಯರ ಮೇಲಾಗುತ್ತಿರುವ ಅನಾಚಾರಗಳನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ.
"ಹಿಂಸಾಚಾರವನ್ನು ಪ್ರತಿಭಟಿಸಲು, ನ್ಯಾಯಕ್ಕಾಗಿ ಒತ್ತಾಯಿಸಲು ಈ ದಿನ ಮಧ್ಯರಾತ್ರಿ ಇಂಡಿಯಾ ಗೇಟ್ ಬಳಿ ಮೌನ, ಶಾಂತಿಯುತ ಮೇಣದಬತ್ತಿ ಪ್ರತಿಭಟನೆಯಲ್ಲಿ ನನ್ನನ್ನು ಕೂಡಿಕೊಳ್ಳಿ" ರಾಹುಲ್ ಟ್ವೀಟ್ ಮಾಡಿದ್ದಾರೆ.
ಈ ಮಧ್ಯರಾತ್ರಿ 12 ಗಂಟೆಗೆ  ಡಿಪಿಸಿಸಿ ಕಚೇರಿಯಿಂದ ಇಂಡಿಯಾ ಗೇಟ್ ವರೆಗೆ ಶಾಂತಿಯುತ ಮೇಣದಬತ್ತಿ ಹಿಡಿದು ಮೆರವಣಿಗೆ ನಡೆಸಲಾಗುವುದು  ಎಂದು ಕಾಂಗ್ರೆಸ್ ವಕ್ತಾರ ಅಜಯ್ ಮಾಕೆನ್ ಹೇಳಿದ್ದಾರೆ.
ಇದಕ್ಕೂ ಮುನ್ನ ಜಮ್ಮು ಕಾಶ್ಮೀರದ ಕಥುವಾ ದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿ ರಾಹುಲ್  ತೀವ್ರ ಆಘಾತ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT