ಸುಷ್ಮಾ ಸ್ವರಾಜ್ 
ದೇಶ

ಐಇಎಫ್ '18: ಭಾರತದ ಆರ್ಥಿಕ ಪ್ರಗತಿಯಲ್ಲಿ ಇಂಧನ ಕ್ಷೇತ್ರದ ಪಾತ್ರ ಮಹತ್ವದು- ಸುಷ್ಮಾ ಸ್ವರಾಜ್

ದೇಶದ ಆರ್ಥಿಕ ಪ್ರಗತಿಯಲ್ಲಿ ಇಂಧನ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಪ್ರತಿಪಾದಿಸಿದ್ದಾರೆ.

ನವದೆಹಲಿ : ದೇಶದ ಆರ್ಥಿಕ ಪ್ರಗತಿಯಲ್ಲಿ ಇಂಧನ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್  ಪ್ರತಿಪಾದಿಸಿದ್ದಾರೆ.

ಅಂತಾರಾಷ್ಟ್ರೀಯ ಇಂಧನ ವೇದಿಯ  16 ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ  ಮಾತನಾಡಿದ ಅವರು, ತೈಲ ಮತ್ತು ಅನಿಲ ಕಾರ್ಯತಂತ್ರದ ಸರಕುಗಳಾಗಿವೆ. ಆರ್ಥಿಕ ಪ್ರಗತಿಯಲ್ಲಿ ಇಂಧನ ಪ್ರಮುಖವಾಗಿದ್ದು, ನವೀಕರಿಸಬಹುದಾದ ಇಂಧನಗಳಿಗೆ ನಾವು ಹೆಚ್ಚಿನ ಗಮನ ಕೇಂದ್ರೀಕರಿಸಬೇಕಾಗಿದೆ ಎಂದು ಹೇಳಿದರು.

 ಸೌರ ಇಂಧನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಾರತ ಮತ್ತು ಫ್ರಾನ್ಸ್ ನಡುವೆ 2016ರಲ್ಲಿ ಅಂತಾರಾಷ್ಟ್ರೀಯ ಸೌರ ಒಪ್ಪಂದ  ಮಾಡಿಕೊಳ್ಳಲಾಗಿದೆ.  ರಾಯಬಾರ ವ್ಯವಹಾರದಲ್ಲಿಯೂ ಇಂಧನ ಪ್ರಮುಖವಾಗಿದ್ದು,ಭೌಗೋಳಿಕ ರಾಜಕಾರಣದಲ್ಲಿ ಅನಿಲ ಸಂಕೀರ್ಣ ಸ್ವರೂಪದಾಗಿದೆ ಎಂದರು.

ಹವಾಮಾನ ವೈಫರೀತ್ಯ ನಿಯಂತ್ರಣಕ್ಕಾಗಿ ಭಾರತ ಕಾರ್ಯೋನ್ಮುಖವಾಗಿದೆ. ಶುದ್ಧ ಇಂಧನಕ್ಕಾಗಿ ಹಲವಾರು ನೀತಿಗಳನ್ನು ಜಾರಿಗೊಳಿಸಲಾಗಿದೆ. ಈ ಕ್ಷೇತ್ರದಲ್ಲಿನ ಸಾಧನೆಗಾಗಿ ವಿಶ್ವದ ವಿವಿಧ ರಾಷ್ಟ್ರಗಳಿಂದ  ತಂತ್ರಜ್ಞಾನವನ್ನು ನಿರೀಕ್ಷಿಸಲಾಗುತ್ತಿದೆ . 2022ರೊಳಗೆ ದೇಶ 175 ಜಿ ಡಬ್ಲ್ಯೂ ನಷ್ಟು ಇಂಧನ ಉತ್ಪಾಧಿಸುವ ನಿರೀಕ್ಷೆ ಹೊಂದಲಾಗಿದೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದರು.




Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT