ಸುಷ್ಮಾ ಸ್ವರಾಜ್ 
ದೇಶ

ಐಇಎಫ್ '18: ಭಾರತದ ಆರ್ಥಿಕ ಪ್ರಗತಿಯಲ್ಲಿ ಇಂಧನ ಕ್ಷೇತ್ರದ ಪಾತ್ರ ಮಹತ್ವದು- ಸುಷ್ಮಾ ಸ್ವರಾಜ್

ದೇಶದ ಆರ್ಥಿಕ ಪ್ರಗತಿಯಲ್ಲಿ ಇಂಧನ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಪ್ರತಿಪಾದಿಸಿದ್ದಾರೆ.

ನವದೆಹಲಿ : ದೇಶದ ಆರ್ಥಿಕ ಪ್ರಗತಿಯಲ್ಲಿ ಇಂಧನ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್  ಪ್ರತಿಪಾದಿಸಿದ್ದಾರೆ.

ಅಂತಾರಾಷ್ಟ್ರೀಯ ಇಂಧನ ವೇದಿಯ  16 ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ  ಮಾತನಾಡಿದ ಅವರು, ತೈಲ ಮತ್ತು ಅನಿಲ ಕಾರ್ಯತಂತ್ರದ ಸರಕುಗಳಾಗಿವೆ. ಆರ್ಥಿಕ ಪ್ರಗತಿಯಲ್ಲಿ ಇಂಧನ ಪ್ರಮುಖವಾಗಿದ್ದು, ನವೀಕರಿಸಬಹುದಾದ ಇಂಧನಗಳಿಗೆ ನಾವು ಹೆಚ್ಚಿನ ಗಮನ ಕೇಂದ್ರೀಕರಿಸಬೇಕಾಗಿದೆ ಎಂದು ಹೇಳಿದರು.

 ಸೌರ ಇಂಧನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಾರತ ಮತ್ತು ಫ್ರಾನ್ಸ್ ನಡುವೆ 2016ರಲ್ಲಿ ಅಂತಾರಾಷ್ಟ್ರೀಯ ಸೌರ ಒಪ್ಪಂದ  ಮಾಡಿಕೊಳ್ಳಲಾಗಿದೆ.  ರಾಯಬಾರ ವ್ಯವಹಾರದಲ್ಲಿಯೂ ಇಂಧನ ಪ್ರಮುಖವಾಗಿದ್ದು,ಭೌಗೋಳಿಕ ರಾಜಕಾರಣದಲ್ಲಿ ಅನಿಲ ಸಂಕೀರ್ಣ ಸ್ವರೂಪದಾಗಿದೆ ಎಂದರು.

ಹವಾಮಾನ ವೈಫರೀತ್ಯ ನಿಯಂತ್ರಣಕ್ಕಾಗಿ ಭಾರತ ಕಾರ್ಯೋನ್ಮುಖವಾಗಿದೆ. ಶುದ್ಧ ಇಂಧನಕ್ಕಾಗಿ ಹಲವಾರು ನೀತಿಗಳನ್ನು ಜಾರಿಗೊಳಿಸಲಾಗಿದೆ. ಈ ಕ್ಷೇತ್ರದಲ್ಲಿನ ಸಾಧನೆಗಾಗಿ ವಿಶ್ವದ ವಿವಿಧ ರಾಷ್ಟ್ರಗಳಿಂದ  ತಂತ್ರಜ್ಞಾನವನ್ನು ನಿರೀಕ್ಷಿಸಲಾಗುತ್ತಿದೆ . 2022ರೊಳಗೆ ದೇಶ 175 ಜಿ ಡಬ್ಲ್ಯೂ ನಷ್ಟು ಇಂಧನ ಉತ್ಪಾಧಿಸುವ ನಿರೀಕ್ಷೆ ಹೊಂದಲಾಗಿದೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದರು.




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT