ನ್ಯಾ.ಚಲಮೇಶ್ವರ್ 
ದೇಶ

ಮುಖ್ಯ ನ್ಯಾಯಮೂರ್ತಿಗಳ ಅಧಿಕಾರ ಪ್ರಶ್ನಿಸಿದ ಪಿಐಎಲ್ ವಿಚಾರಣೆ ನಡೆಸಲು ನ್ಯಾ.ಚಲಮೇಶ್ವರ್ ನಕಾರ

ಪ್ರಕರಣಗಳ ಹಂಚಿಕೆಗಾಗಿ ಮಾರ್ಗಸೂಚಿಯನ್ನು ರಚಿಸುವುದಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಕಾನೂನು ಸಚಿವ ಶಾಂತಿ ಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನ

ನವದೆಹಲಿ: ಪ್ರಕರಣಗಳ ಹಂಚಿಕೆಗಾಗಿ ಮಾರ್ಗಸೂಚಿಯನ್ನು ರಚಿಸುವುದಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಕಾನೂನು ಸಚಿವ ಶಾಂತಿ ಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಚಲಮೇಶ್ವರ್ ನಿರಾಕರಿಸಿದ್ದಾರೆ. 
ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿರುವ ಚಲಮೇಶ್ವರ್, ಶಾಂತಿ ಭೂಷಣ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ನಿರಾಕರಿಸಿದ್ದಾರೆ. ಇನ್ನು ಮತ್ತೊಂದು ಬೆಳವಣಿಗೆಯಲ್ಲಿ ತಮ್ಮ ತಂದೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಾಣೆ ಮಾಡಬೇಕೆಂದು ಪ್ರಶಾಂತ್ ಭೂಷಣ್ ಮನವಿ ಸಲ್ಲಿಸಿದ್ದು,  ಪರಾಮರ್ಶಿಸಿಸುವುದಾಗಿ ಸಿಜೆಐ ತಿಳಿಸಿದ್ದಾರೆ. 
ಇದಕ್ಕೂ ಮುನ್ನ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ.ಚಲಮೇಶ್ವರ್ ಪೀಠದ ಎದುರು ಸಲ್ಲಿಸಿದ್ದರು. ಆದರೆ ನ್ಯಾ.ಚಲಮೇಶ್ವರ್ ಅವರು ಅರ್ಜಿ ವಿಚಾರಣೆಗೆ ನಿರಾಕರಿಸಿದ್ದಾರೆ. ಸುಪ್ರೀಂ ಕೋರ್ಟ್ ನ ನ್ಯಾ. ಕುರಿಯನ್ ಜೋಸೆಫ್ ಹಾಗೂ ಚಲಮೇಶ್ವರ್ ಅವರು ನ್ಯಾಯಾಂಗದಲ್ಲಿ ಕಾರ್ಯಾಂಗ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿಗಳ ಅಧಿಕಾರವನ್ನು ಪ್ರಶ್ನಿಸಿದ ಪಿಐಎಲ್ ವಿಚಾರಣೆ ನಡೆಸಲು ನ್ಯಾ.ಚಲಮೇಶ್ವರ್ ನಿರಾಕರಿಸಿದ್ದು, ನನ್ನ ವಿರುದ್ಧ ನಿರಂತರ ಟೀಕೆ ವ್ಯಕ್ತವಾಗುತ್ತಿದೆ. ನನ್ನ ಕಷ್ಟವನ್ನು ಅರ್ಥಮಾಡಿಕೊಳ್ಳಿ ಎಂದು ಭೂಷಣ್ ಗೆ ಚಲಮೇಶ್ವರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT