ನ್ಯಾ.ಚಲಮೇಶ್ವರ್ 
ದೇಶ

ಮುಖ್ಯ ನ್ಯಾಯಮೂರ್ತಿಗಳ ಅಧಿಕಾರ ಪ್ರಶ್ನಿಸಿದ ಪಿಐಎಲ್ ವಿಚಾರಣೆ ನಡೆಸಲು ನ್ಯಾ.ಚಲಮೇಶ್ವರ್ ನಕಾರ

ಪ್ರಕರಣಗಳ ಹಂಚಿಕೆಗಾಗಿ ಮಾರ್ಗಸೂಚಿಯನ್ನು ರಚಿಸುವುದಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಕಾನೂನು ಸಚಿವ ಶಾಂತಿ ಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನ

ನವದೆಹಲಿ: ಪ್ರಕರಣಗಳ ಹಂಚಿಕೆಗಾಗಿ ಮಾರ್ಗಸೂಚಿಯನ್ನು ರಚಿಸುವುದಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಕಾನೂನು ಸಚಿವ ಶಾಂತಿ ಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಚಲಮೇಶ್ವರ್ ನಿರಾಕರಿಸಿದ್ದಾರೆ. 
ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿರುವ ಚಲಮೇಶ್ವರ್, ಶಾಂತಿ ಭೂಷಣ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ನಿರಾಕರಿಸಿದ್ದಾರೆ. ಇನ್ನು ಮತ್ತೊಂದು ಬೆಳವಣಿಗೆಯಲ್ಲಿ ತಮ್ಮ ತಂದೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಾಣೆ ಮಾಡಬೇಕೆಂದು ಪ್ರಶಾಂತ್ ಭೂಷಣ್ ಮನವಿ ಸಲ್ಲಿಸಿದ್ದು,  ಪರಾಮರ್ಶಿಸಿಸುವುದಾಗಿ ಸಿಜೆಐ ತಿಳಿಸಿದ್ದಾರೆ. 
ಇದಕ್ಕೂ ಮುನ್ನ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ.ಚಲಮೇಶ್ವರ್ ಪೀಠದ ಎದುರು ಸಲ್ಲಿಸಿದ್ದರು. ಆದರೆ ನ್ಯಾ.ಚಲಮೇಶ್ವರ್ ಅವರು ಅರ್ಜಿ ವಿಚಾರಣೆಗೆ ನಿರಾಕರಿಸಿದ್ದಾರೆ. ಸುಪ್ರೀಂ ಕೋರ್ಟ್ ನ ನ್ಯಾ. ಕುರಿಯನ್ ಜೋಸೆಫ್ ಹಾಗೂ ಚಲಮೇಶ್ವರ್ ಅವರು ನ್ಯಾಯಾಂಗದಲ್ಲಿ ಕಾರ್ಯಾಂಗ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿಗಳ ಅಧಿಕಾರವನ್ನು ಪ್ರಶ್ನಿಸಿದ ಪಿಐಎಲ್ ವಿಚಾರಣೆ ನಡೆಸಲು ನ್ಯಾ.ಚಲಮೇಶ್ವರ್ ನಿರಾಕರಿಸಿದ್ದು, ನನ್ನ ವಿರುದ್ಧ ನಿರಂತರ ಟೀಕೆ ವ್ಯಕ್ತವಾಗುತ್ತಿದೆ. ನನ್ನ ಕಷ್ಟವನ್ನು ಅರ್ಥಮಾಡಿಕೊಳ್ಳಿ ಎಂದು ಭೂಷಣ್ ಗೆ ಚಲಮೇಶ್ವರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT