ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ಪೊಲೀಸ್ ದಾಳಿ ವೇಳೆ ಕಟ್ಟಡ ಮೇಲಿಂದ ಬಿದ್ದು ಇಬ್ಬರು ಲೈಂಗಿಕ ಕಾರ್ಯಕರ್ತೆಯರ ಸಾವು

ಪೊಲೀಸ್ ದಾಳಿ ವೇಳೆ ಇಲ್ಲಿನ ಗ್ರಾಂಟ್ ರಸ್ತೆಯಲ್ಲಿನ ಕಟ್ಟಡವೊಂದರ ಮೇಲಿಂದ ಬಿದ್ದು 30 ಹಾಗೂ 50 ವರ್ಷದ ಇಬ್ಬರು ಲೈಂಗಿಕ ಕಾರ್ಯಕರ್ತೆಯರು ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ಇಲ್ಲಿನ ಗ್ರಾಂಟ್ ರಸ್ತೆಯಲ್ಲಿ ನಡೆದಿದೆ

ಮುಂಬೈ: ಪೊಲೀಸ್ ದಾಳಿ ವೇಳೆ ಇಲ್ಲಿನ ಗ್ರಾಂಟ್ ರಸ್ತೆಯಲ್ಲಿನ ಕಟ್ಟಡವೊಂದರ ಮೇಲಿಂದ ಬಿದ್ದು  30 ಹಾಗೂ 50 ವರ್ಷದ ಇಬ್ಬರು ಲೈಂಗಿಕ ಕಾರ್ಯಕರ್ತೆಯರು  ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ಇಲ್ಲಿನ ಗ್ರಾಂಟ್ ರಸ್ತೆಯಲ್ಲಿ ನಡೆದಿದೆ.

ಪೊಲೀಸರು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಮೂರನೇ ಮಹಡಿಯಿಂದ ಜಿಗಿದ್ದು ಅಥವಾ ಬಿದ್ದು ಅವರಿಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಡಿ. ಬಿ. ಮಾರ್ಗ್ ಪೊಲೀಸ್ ಠಾಣೆಯಿಂದ 50 ಮೀ. ದೂರದಲ್ಲಿ ಈ ಕಟ್ಟಡವಿದೆ.

ಮೃತರು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಈ ಸಂಬಂಧ ಪೊಲೀಸರು ಅಪಘಾತ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ಲೈಂಗಿಕ ಚಟುವಟಿಕೆ ವಿರುದ್ಧ ಇಲ್ಲಿನ ನಿವಾಸಿಗಳು ಕಳೆದ ತಿಂಗಳು ಮೊಂಬತ್ತಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಕೂಡಲೇ ಲೈಂಗಿಕ  ಕಾರ್ಯಕರ್ತೆಯರ  ಅಡ್ಡೆಗಳ ಮೇಲೆ ಕಾರ್ಯಾಚರಣೆ ನಡೆಸಿದ್ದರು. ಆಗಿನಿಂದಲೂ  ಪೊಲೀಸರ ತಂಡ ಆಗ್ಗಾಗೇ ಭೇಟಿ ನೀಡಿ ಇಂತಹ ಚಟುವಟಿಕೆಗಳು ಮತ್ತೆ ತಲೆ ಎತ್ತದಂತೆ  ನಿಗಾವಹಿಸಿದ್ದರು.

ಆದರೆ, ಮಂಗಳವಾರ ರಾತ್ರಿ ಪರಿಶೀಲನೆ ವೇಳೆ ಪೊಲೀಸರು ಓಮ್ ನಿವಾಸ್ ಕಟ್ಟಡಕ್ಕೆ ಭೇಟಿ ನೀಡಿದ್ದಾಗ ಮೂವರು ಮಹಿಳೆಯರು, ನಾಲ್ವರು ಪುರುಷರು ಕಂಡುಬಂದಿದ್ದಾರೆ. ನಂತರ ವಿಚಾರಣೆ ನಡೆಸಿದ ಬಳಿಕ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆ ಕಟ್ಟಡದಿಂದ ಪೊಲೀಸರು ಹಿಂತಿರುಗಿದ 20 ನಿಮಿಷದ ಬಳಿಕ ಒಬ್ಬ ಮಹಿಳೆ ಠಾಣೆಗೆ ಬಂದಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿರುವ ಸ್ಥಿತಿಯಲ್ಲಿರುವ  ಇರುವುದಾಗಿ ಹೇಳಿದ್ದಾರೆ.

ನಂತರ ಪೊಲೀಸರ ತಂಡ ಅಲ್ಲಿಗೆ ಧಾವಿಸಿದ್ದು,  ಒಬ್ಬಳನ್ನು ಜೆಜೆ ಆಸ್ಪತ್ರೆಗೆ ಸೇರಿಸಲಾಗಿದ್ದು, ಆಕೆ ಮೃತಪಟ್ಟಿದ್ದಾಳೆ.ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಮಹಿಳೆಯೂ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT