ಬಿಜೆಪಿ ಶಾಸಕರು 
ದೇಶ

ಕಥುವಾ ಅತ್ಯಾಚಾರ ಪ್ರಕರಣ: ಆರೋಪಿಗಳ ಬೆಂಬಲಕ್ಕೆ ನಿಂತಿದ್ದ ಇಬ್ಬರು ಬಿಜೆಪಿ ಸಚಿವರ ರಾಜೀನಾಮೆ

ಜಮ್ಮು-ಕಾಶ್ಮೀರದ ಕಥುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳ ಬೆಂಬಲಕ್ಕೆ ನಿಂತಿದ್ದ ಇಬ್ಬರು ಬಿಜೆಪಿ ಸಚಿವರು ರಾಜೀನಾಮೆ ನೀಡಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಕಥುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳ ಬೆಂಬಲಕ್ಕೆ ನಿಂತಿದ್ದ ಇಬ್ಬರು ಬಿಜೆಪಿ ಸಚಿವರು ರಾಜೀನಾಮೆ ನೀಡಿದ್ದಾರೆ. 
ಸಚಿವರ ರಾಜೀನಾಮೆಗೆ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಪಕ್ಷ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು. ಸಚಿವರ ರಾಜೀನಾಮೆ ಹಾಗೂ ಅದರಿಂದ ಬಿಜೆಪಿ-ಪಿಡಿಪಿ ಮೈತ್ರಿಯ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. 
ಮಾರ್ಚ್ ತಿಂಗಳಲ್ಲಿ ನಡೆದ ಹಿಂದೂ ಏಕ್ತಾ ಮಂಚ್ ಆಯೋಜಿಸಿದ್ದ ರ್ಯಾಲಿಯಲ್ಲಿ ಕೈಗಾರಿಕಾ ಸಚಿವ ಚಂದ್ರ ಪ್ರಕಾಶ್ ಗಂಗಾ ಹಾಗೂ ಅರಣ್ಯ ಸಚಿವ ಲಾಲ್ ಸಿಂಗ್ ಅತ್ಯಾಚಾರ ಪ್ರಕರಣದ ಆರೋಪಿಗಳ ಪರವಾಗಿ ಮಾತನಾಡಿದ್ದರು. ಅತ್ಯಾಚಾರದ ಪ್ರಕರಣದ ಆರೋಪಿಗಳ ಬಂಧನವನ್ನು ಚಂದ್ರ ಪ್ರಕಾಶ್ ಗಂಗಾ ಜಂಗಲ್ ರಾಜ್ ಎಂದು ಹೇಳಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದೆ ಬಂಧನ ಮಾಡಬಾರದು ಎಂದು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಇನ್ನು ಲಾಲ್ ಸಿಂಗ್  ನಿರ್ಬಂಧ ಹೇರಿದ್ದ ಆದೇಶವನ್ನು ಮೀರಿ ಪ್ರತಿಭಟನೆ ಮಾಡಿ ಇಲ್ಲವೇ ಮನೆಯಲ್ಲಿ ಕುಳಿತುಕೊಳ್ಳಿ ಎಂದು ಜನರಿಗೆ ಕರೆ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT